ಕಲಬುರಗಿ| ಭೀಕರ ಅಪಘಾತ ಮೂವರು ಸ್ಥಳದಲ್ಲೇ ಸಾವು!

Date:

Share post:

ಕಲಬುರಗಿ: ಕಬ್ಬಿನ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ನಡುವೆ ಸಂಭವಿಸಿದ ಭೇಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಅಫಜಲಪುರ ಮುಖ್ಯ ರಸ್ತೆಯ ಗೊಬ್ಬುರ (ಬಿ) ಬಳಿ ನಡೆದಿದೆ.

ಕಲಬುರಗಿ ನಗರದ ನಿವಾಸಿಗಳಾದ ವಿನೋದ್ ರವಿರಾವ್ (54), ಅನುಪ್ ಮಾಧವ್ ಬೆಂಗೇರಿ(29) ಮತ್ತು ಗೊಬ್ಬರ್ ಬಿ ಗ್ರಾಮದ ನಿವಾಸಿ ಬೈಕ್ ಸವಾರ ಬಸವರಾಜ್ ಚಿಸ್ತಿ ಎಂಬಾತರೆ ಮೃತಪಟ್ಟರೆಂದು ಗುರುತಿಸಲಾಗಿದೆ.

ಟೆಂಪೊದಲ್ಲಿದ್ದ ಮೃತರಿಬ್ಬರು ಸೇರಿದಂತೆ ಒಟ್ಟು 8 ಮಂದಿ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ದರ್ಶನ ಪಡೆದು ಕಲಬುರಗಿ ಯತ್ತ ತೆರಳುತ್ತಿದ್ದರು. ಈ ವೇಳೆಯೇ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಎಸ್.ಪಿ ಅಡ್ಡೂರು ಶ್ರೀನಿವಾಸಲು ಮತ್ತು ಡಿಎಸ್ಪಿ ಗೊಪಿ ಬಿ.ಆರ್, ಸಿಪಿಐ ಪ್ರಕಾಶ್ ಯಾತನೂರ್, ಸಿಬ್ಬಂದಿ ಸಂಗಣ್ಣ ಸೇರಿದಂತೆ ಗಣಗಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಾಗಿ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...