ಕಲಬುರಗಿ| ಬಾಲಕಾರ್ಮಿಕತೆ ನಿರ್ಮೂಲನೆಗೆ ಎಲ್ಲರ ಪ್ರಯತ್ನ ಅಗತ್ಯ: ಸಂಗೀತಾ ಸಡಕೀನ 

Date:

Share post:

ಕಲಬುರಗಿ: ಶಿಕ್ಷಣದಿಂದ ವಂಚಿತಗೊಂಡು ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದು ಎಂ. ಎಸ್. ಇರಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಂಗೀತಾ ಸಡಕೀನ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕುಟುಂಬದಲ್ಲಿನ ಬಡತನ, ಅನಕ್ಷರತೆ, ಶಿಕ್ಷಣದ ಮಹತ್ವದ ಕುರಿತು ಅರಿವಿಲ್ಲದಿರುವುದು, ವಲಸೆ ಹೋಗುವುದು, ತೀವ್ರತರಹದ ಕಾಯಿಲೆಯಿಂದ ಬಳಲುತ್ತಿರುವ ಪೋಷಕರು, ಅಸ್ಪೃಶ್ಯತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಶಾಲೆಗೆ ಹೋಗದೇ ಕೆಲಸಕ್ಕೆ ಹೋಗಿ ಬಾಲಕಾರ್ಮಿಕರಾಗುತ್ತಾರೆ. ಮಕ್ಕಳ ರಕ್ಷಣೆ ಹಾಗೂ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು

ಬಾಲ ಕಾರ್ಮಿಕ ಪದ್ಧತಿಯಿಂದ ಆಗುವ ದುಷ್ಪರಿಣಾಮ ಕುರಿತು ಪೋಷಕರಲ್ಲಿ ಅರಿವು ಮೂಡಿಸಿ, ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡಬೇಕು. ಮಕ್ಕಳಿಗೆ ಅವರ ಹಕ್ಕುಗಳ ಕುರಿತು ತಿಳಿವಳಿಕೆ ನೀಡಬೇಕು. ತಂದೆ ತಾಯಿಗಳು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಆನಂದ ಕೊಪ್ಪದ ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರಮಾಣ ವಚನ ಬೋಧಿಸಿದರು.

ಹಿರಿಯ ಉಪನ್ಯಾಸಕರಾದ ಕೃಷ್ಣವೇಣಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...