ಕರ್ಪೂರಿ ಠಾಕೂರ್​​ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ!

Date:

Share post:

ಬಿಹಾರ ರಾಜ್ಯದ ಮಾಜಿ ಸಿಎಂ, ಜನನಾಯಕ ಎಂದೇ ಖ್ಯಾತಿ ಪಡೆದ ಕರ್ಪೂರಿ ಠಾಕೂರ್​​ ಅವರಿಗೆ ಈ ಬಾರಿಯ ‘ಭಾರತ ರತ್ನ’ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಠಾಕೂರ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಸೇವೆಯನ್ನು ಪರಿಗಣಿಸಿ, ಈ ಮಹೋನ್ನತ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

karpoori thakoor

ಠಾಕೂರ್ ಅವರು ಡಿಸೆಂಬರ್ 1970 & ಜೂನ್ 1971ರ ನಡುವೆ 1977 ಏಪ್ರಿಲ್ 1979ರ ವರೆಗೆ ಬಿಹಾರದ ಸಿಎಂ ಆಗಿದ್ದರು. ಅಲ್ಲದೆ, ಅವರು ಎರಡು ಬಾರಿ ಉಪಮುಖ್ಯಮಂತ್ರಿಯೂ ಸಹ ಆಗಿದ್ದರು. ಠಾಕೂರ್ ಅವರು ಅಲ್ಲಿನ ಹಿಂದುಳಿದ ವರ್ಗಗಳ ಏಳಿಗೆಗೆ ಹೋರಾಟ ನಡೆಸಿದ್ದರು. ಅವರು ಸಿಎಂ ಆಗಿದ್ದಾಗ ಹಲವಾರು ಯೋಜನೆಗಳನ್ನು ಹಿಂದುಳಿದ ಜಾತಿಗಳಿಗೆ ಜಾರಿಗೊಳಿಸಿದ್ದರು.

ಠಾಕೂರ್ ಅವರನ್ನು ಈ ಬಾರಿಯ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡುತ್ತಿರುವುದು ಸಂತಸವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು & ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಅಕ್ರಮ ಗಾಂಜಾ ಮಾರಾಟ; 48 ಸಾವಿರ ಮೌಲ್ಯದ 3 ಕೆಜಿ ಗಾಂಜಾ ಜಪ್ತಿ

ಕಲಬುರಗಿ: ಮಹಾರಾಷ್ಟ್ರದ ಮೂಲದಿಂದ ಅಕ್ರಮ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ...

ಕಲಬುರಗಿ| ಟಾಟಾ ವಾಹನ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು

ಕಲಬುರಗಿ: ರಸ್ತೆ ದಾಟುತ್ತಿದ್ದಾಗ ಐಚರ್‌ ನಮೂನೆಯ ಟಾಟಾ ವಾಹನ ಡಿಕ್ಕಿ ಹೊಡೆದು...

ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ...

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ...