ಕಲಬುರಗಿ| ಅಹಮದಾಬಾದ್ ವಿಮಾನ ದುರಂತ ಪ್ರಕರಣ; ನ್ಯಾಯಾಂಗ ತನಿಖೆಗೆ ಸಚಿವ ಎಚ್ ಕೆ ಪಾಟೀಲ್ ಆಗ್ರಹ

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣವನ್ನು ಕೂಡಲೇ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಸಚಿವ ಎಚ್.ಕೆ ಪಾಟೀಲ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ದೇಶದ ದೊಡ್ಡ ದುರಂತದ ಸಂಧರ್ಭದಲ್ಲಿ ನಮ್ಮ ಅಧ್ಯಕ್ಷರು ಮಲ್ಲಿಕಾರ್ಜುನ್ ಖರ್ಗೆ ಅವರು ನ್ಯಾಯಾಂಗ ತನಿಖೆಗೆ ಆಗ್ರಹ ಮಾಡಿದ್ದಾರೆ, ಪ್ರಧಾನಿ ಈ ವಿಚಾರದಲ್ಲಿ ತಕ್ಷಣ ಸ್ಪಂದಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯ ಮಾಡಿದರು.

ಉಳಿದ ರಾಷ್ಟ್ರಕ್ಕಿಂತ ನಮ್ಮಲ್ಲೂ ತಾಂತ್ರಿಕ ಮೇಲ್ವಿಚಾರಣೆ ಕಡಿಮೆ ಇದೆ ಎಂದು ಟೆಕ್ನಿಕಲ್ ಜನ ಮಾತಾಡ್ತಾರೆ, ಆ ಮಾತು ಬರದ ಹಾಗೆ ಅಭಿವೃದ್ಧಿ ಹೊಂದಿದ ದೇಶದಲ್ಲಿ ಟೆಕ್ನಿಕಲ್ ಮಾನಿಟರ್ ಹೇಗೆ ಮಾಡುತ್ತಾರೆ ಎನ್ನುವುದು ನಮ್ಮಲ್ಲಿ ಶುರುವಾಗಬೇಕು ಎಂದ ಅವರು, ವಿಮಾನ ದುರಂತದಲ್ಲಿ ಮಡಿದವರಿಗೆ ಶಾಂತಿ ಸಿಗಲಿ, ಒಬ್ಬ ಮಾತ್ರ ಬದುಕುಳಿದವರು ಆತನಿಗೆ ದೇವರ ವಿಶೇಷ ಆಶಿರ್ವಾದ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಆಗಿರುನಂತಹ ಆರ್ ಸಿಬಿ ಕಾಲ್ತುಳಿತ ಪ್ರತಿಯೊಬ್ಬ ಕನ್ನಡಿಗನಿಗೂ ನೋವಾಗಿದೆ, ಹಲವು ಸಂಧರ್ಭದಲ್ಲಿ ಕಾಲ್ತುಳಿತ ಆಗುತ್ತೆ, ಇಲ್ಲಿ ಬಹಳ ಜನರಿಗೆ ಗಾಯ ಆಗಿ ಸಾವು ಆಗಿವೆ. ಹಾಗಾಗಿ ನಮ್ಮ ಸರಕಾರ ಇಂತಹ ಜನಜಂಗುಳಿ ನಿರ್ವಹಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಶೇಷ ಕಾನೂನು ಜಾರಿಗೆ ಮಾಡಲು ಸಿದ್ಧತೆ ನಡೆಸಿದೆ.

ಜನಜoಗುಳಿಯ ನಿರ್ವಹಣೆ ಬಗ್ಗೆ ವಿಶೇಷ ಕಾನೂನು ಮಾಡುವುದಕ್ಕೆ ನಮ್ಮ ಇಲಾಖೆ ಕರಡು ಮಸೂದೆ ಸಿದ್ಧಪಡಿಸಿದೆ. ಮುಂದಿನ‌ ವಾರದಲ್ಲಿ ಕ್ಯಾಬಿನೇಟ್ ಗಮನಕ್ಕೆ ತಂದು ಒಪ್ಪಿದ್ರೆ ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದರು.

ರೇಸ್ ಕೋರ್ಸ್ ಸ್ಥಳಾಂತರ ಮಾಡುವ ಬಗ್ಗೆ ತಿರ್ಮಾನ ಮಾಡಲಾಗುತ್ತಿದೆ, ಸಿಎಂ ಅವರು ರೇಸ್ ಕೋರ್ಸ್ ಅವರನ್ನ ಕರೆದು ಮಾತಾಡಿದ್ದಾರೆ, ಅಲ್ಲದೆ, ಸ್ಟೇಡಿಯಂ ಕೂಡ ಬೇರೆ ಕಡೆ ಸ್ಥಳಾಂತರ ಮಾಡಬೇಕು ಅನ್ನುವ ಚರ್ಚೆ ಕೂಡ ನಡೆದಿದೆ ಎಂದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...