ಕಲಬುರಗಿ| ಉತ್ತಮ ಆರೋಗಕ್ಕೆ ಯೋಗವೇ ಮದ್ದು: ಬಾಬುರಾವ ಪಾಟೀಲ 

Date:

Share post:

ಕಲಬುರಗಿ: ಇಂದಿನ ದಿನಮಾನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಹಾಗಾಗಿ ಉತ್ತಮ ಆರೋಗ್ಯವನ್ನು ವೃದ್ಧಿಸಲು ಯೋಗ ಮದ್ದು ಆಗಿದೆ ಎಂದು ನಿವೃತ್ತ ಆರೋಗ್ಯ ಅಧಿಕಾರಿಗಳಾದ ಬಾಬುರಾವ ಪಾಟೀಲ ಚಿತ್ತಕೋಟೆ ಹೇಳಿದರು.

ಅವರು ನಗರದ ಜಿಡಿಎ ಲೇಔಟಿನ ದತ್ತಾತ್ರೆಯ ಪಾಟೀಲ ರೇವೂರ ಉದ್ಯಾನವನವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವೆ ಸಾಮಾನ್ಯ ಯೋಗಾಸನ ಒಂದು ಉತ್ತಮ ಔಷಧಿ ಇದ್ದಂತೆ ದಿನನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳು ಬರದಂತೆ ತಡೆಗಟ್ಟಬಹುದಲ್ಲದೆ ಬಂದಂತಹ ರೋಗಗಳು ನಿವಾರಿಸಬಹುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ ಅಂಕಲಗಿ, ಎಸ್.ಜಿ.ಬಿರಾದಾರ, ಸಾಯಿಬಣ್ಣ ನೀಲಪ್ಪಗೋಳ, ಮಲ್ಲಣ್ಣ ದೇಸಾಯಿ, ನಿಜಲಿಂಗ ಗುಗ್ಗರಿ, ಶಿವಕುಮಾರ ದೇಸಾಯಿ, ರಾಜಶೇಖರ ಸರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....