ಕಲಬುರಗಿ| ಕನ್ನಡ ಅಂಕವೀರರಿಗೆ ಗುಣಾಗ್ರಣಿ ಪ್ರಶಸ್ತಿ ಪ್ರದಾನ

Date:

Share post:

ಕಲಬುರಗಿ : ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಕುಸಿದಿದ್ದರೂ ಆತ್ಮಸ್ಥೈರ್ಯ ಕಳೆದಕೊಳ್ಳದೇ ಅದರ ಸುಧಾರಣೆಗಾಗಿ ಕಾಲಮಿತಿ ಯೋಜನೆ ರೂಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಹತ್ತನೇ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹತ್ತರ ಕನ್ನಡಕೆ… ಗುಣಾಗ್ರಣಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ಸತತವಾಗಿ ಓದುವ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಮುಂದಾಗಬೇಕು. ಜತೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ನೇಮಕ ಮಾಡಿ ಕೊಳ್ಳಬೇಕು. ಮತ್ತು ಮಕ್ಕಳಲ್ಲಿ ಓದು ಬರೆಯುವ ಆಸಕ್ತಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಫಲಿತಾಂಶ ಸುಧಾರಣೆಗೊಳ್ಳಲು ಸಾಧ್ಯ ಎಂದರು.

ಫಲಿತಾಂಶ ಕುಸಿತಕ್ಕೆ ಕೇವಲ ಶಿಕ್ಷಣ ಇಲಾಖೆ ಕಾರಣವಲ್ಲ. ಅದಕ್ಕೆ ಪೂರಕ ವಾತಾವರಣ ಸೃಷ್ಟಿಸಿ ಗುಣಾತ್ಮಕ ಶಿಕ್ಷಣದ ಕಲಿಕೆಗೆ ಕ್ರಿಯಾಯೋಜನೆ ರೂಪಿಸಬೇಕು. ಫಲಿತಾಂಶ ಕಾರಣಗಳನ್ನು ಪತ್ತೆ ಹಚ್ಚಿ ಪಾಲಕರು ಮತ್ತು ತಜ್ಞರೊಂದಿಗೆ ಚರ್ಚೆ, ಸಂವಾದಗಳನ್ನು ನಡೆಸಿ ಪರಿಹಾರ ಕಾಣಬೇಕು. ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಕನ್ನಡ ಭವನದ ಆವರಣದಲ್ಲಿನ ಸಾಹಿತ್ಯ ಮಂಟಪಕ್ಕೊಂದು ಸುಸಜ್ಜೀತ ಶೆಡ್ ನಿರ್ಮಾಣಕ್ಕೆ 5 ಲಕ್ಷ ರೂ. ಗಳ ಅನುದಾ ನ ಶೀಘ್ರವೇ ಮಂಜೂರು ಮಾಡಲಾಗುವುದು. ಇದರಿಂದ ಇನ್ನಷ್ಟು ಕನ್ನಡ ಚಟುವಟಿಕೆಗಳು ಕೈಗೊಳ್ಳಬಹುದಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಡಿಡಿಪಿಐ ಸೂರ್ಯಕಾಂತ ಮದಾನೆ ಮಾತನಾಡಿ, ಫಲಿತಾಂಶ ಸುಧಾರಣೆಗೆ ಕನ್ನಡ ಭಾಷೆಯನ್ನು ಓದುವ ಹವ್ಯಾಸವನ್ನಾಗಿ ರೂಢಿಸಿಕೊಳ್ಳಬೇಕು. ಈ ಬಾರಿಯ ಫಲಿತಾಂಶ ಪ್ರÀತಿಶತದಲ್ಲಿ ಸುಧಾರಣೆಯಾಗಿದ್ದು, ಪರೀಕ್ಷೆ 2 ರಲ್ಲಿ ಇನ್ನಷ್ಟು ನಿರೀಕ್ಷೆ ಹೊಂದಲಾಗಿದೆ. ಇಂಥ ಕುಸಿತಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡದೇ ಸಾಮೂಹಿಕ ಜವಾಬ್ದಾರಿ ಹೊರಬೇಕಾಗಿದೆ. ಪೋಷಕರ ಸಹಕಾರ ಮುಖ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನಮ್ಮ ಕನ್ನಡದ ನೆಲ-ಜಲ, ಕನ್ನಡದ ಗಾಳಿಯನ್ನು ಉಸಿರಾಡುವ ನಾವು ಕನ್ನಡದ ಅಸ್ಮಿತೆ, ಅನನ್ಯತೆಯನ್ನು ಗಟ್ಟಿಗೊಳಿಸುವ ಪ್ರಯತ್ನ ಈ ಕಾರ್ಯಕ್ರಮದ್ದಾಗಿದೆ. ಶಿಕ್ಷಕರು ಮಕ್ಕಳಿಗೆ ಕೇವಲ ಹೆಚ್ಚವು ಅಂಕ ಗಳಿಸುವ ಶಿಕ್ಷಣ ನೀಡಿದರೆ ಸಾಲದು. ಗುಣಮಟ್ಟದ ಶಿಕ್ಷಣದ ಜತೆಗೆ ತಂದೆ-ತಾಯಿ ಹಾಗೂ ಗುರು ಹಿರಿಯರನ್ನು ಗೌರವಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ದೇಶಭಕ್ತಿಯನ್ನು ಕಲಿಸಿಕೊಡುವುದು ಇಂದಿನ ಅಗತ್ಯವಾಗಿದೆ ಎಂದರು. ಪರಿಷತ್ತು ಹಮ್ಮಿಕೊಂಡಿರುವ ಕನ್ನಡದ ಕಾರ್ಯಕ್ರಮಗಳು ನವೆಂಬರ್ ಮಾಸಕ್ಕೆ ಮಾತ್ರ ಸೀಮಿತಗೊಳಿಸದೇ ವರ್ಷಪೂರ್ತಿಯಾಗಿ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಕಲ್ಯಾಣ ಕರ್ನಾಟಕದ ನೌಕರರ ಸಂಘದ ಅಧ್ಯಕ್ಷ ಮಹೇಶಕುಮಾರ ಹೆಬ್ಬಾಳೆ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ, ಸುರೇಶ ದೇಶಪಾಂಡೆ, ಸುರೇಶ ದೇಶಪಾಂಡೆ, ಶರಣಬಸಪ್ಪ ಕೋಬಾಳ, ಸಂತೋಷ ಕುಡಳ್ಳಿ, ಪ್ರಭುಲಿಂಗ ಮೂಲಗೆ, ಶಿವಲೀಲಾ ಕಲಗುರ್ಕಿ, ಶರಣಬಸಪ್ಪ ನರೂಣಿ, ಶಕುಂತಲಾ ಪಾಟೀಲ, ಎಂ.ಎನ್. ಸುಗಂಧಿ, ದಿನೇಶ ಮದಕರಿ, ರಮೇಶ ಡಿ ಬಡಿಗೇರ, ಸಂದೀಪ ಭರಣಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಅಕ್ರಮ ಗಾಂಜಾ ಮಾರಾಟ; 48 ಸಾವಿರ ಮೌಲ್ಯದ 3 ಕೆಜಿ ಗಾಂಜಾ ಜಪ್ತಿ

ಕಲಬುರಗಿ: ಮಹಾರಾಷ್ಟ್ರದ ಮೂಲದಿಂದ ಅಕ್ರಮ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ...

ಕಲಬುರಗಿ| ಟಾಟಾ ವಾಹನ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು

ಕಲಬುರಗಿ: ರಸ್ತೆ ದಾಟುತ್ತಿದ್ದಾಗ ಐಚರ್‌ ನಮೂನೆಯ ಟಾಟಾ ವಾಹನ ಡಿಕ್ಕಿ ಹೊಡೆದು...

ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ...

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ...