ಕಲಬುರಗಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ ಫೈನಲ್ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೇ ಖುಷಿಯಲ್ಲಿ ದೇಶದಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಕಲಬುರಗಿ ನಗರದ ವಿವಿಧೆಡೆ ಸಂಭ್ರಮಿಸಿದ ಫ್ಯಾನ್ಸ್ ರ ಪೊಲೀಸರು ಲಾಠಿ ನೆಲಕ್ಕೆ ಬಡಿದು ಚದುರಿಸಿದ್ದಾರೆ.
ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಮಧ್ಯ ರಾತ್ರಿ ವರೆಗೂ ನಗರದ ವಿವಿಧೆಡೆ ರ್ಯಾಲಿ, ಘೋಷಣೆಗಳನ್ನು ಕೂಗುತ್ತ ಸಂಭ್ರಮಿಸಿದ್ದಾರೆ. ಇದರ ನಡುವೆ ಜಗತ್ ಸರ್ಕಲ್, ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತ, ಶಹಾಬಜಾರ್, ಕೇಂದ್ರ ಬಸ್ ನಿಲ್ದಾಣ, ಸೂಪರ್ ಮಾರ್ಕೆಟ್, ಲಾಲ್ಗೇರಿ ಕ್ರಾಸ್ ಸೇರಿದಂತೆ ಫ್ಯಾನ್ಸ್ ರಸ್ತೆ ಮಧ್ಯೆಯೇ ಕುಣಿದಾಡುವ ಮೂಲಕ ಸಂಭ್ರಮಿಸಿದ್ದಾರೆ.
ಪ್ರಮುಖ ರಸ್ತೆ ಮಾರ್ಗಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿರುವಾಗ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಈ ವೇಳೆಯಲ್ಲಿ ಪೊಲೀಸರು ತಮ್ಮ ಲಾಠಿಗಳನ್ನು ನೆಲಕ್ಕೆ ಹೊಡೆಯುವ ಮೂಲಕ ಅವರನ್ನು ಚದುರಿಸಿದ್ದಾರೆ. ಇದೇ ವಿಡಿಯೋ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಲಾಠಿ ಚಾರ್ಜ್ ಆಗಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ
ಆರ್ಸಿಬಿ ಅಭಿಮಾನಿಗಳು ರಾತ್ರಿ ವಿಜಯೋತ್ಸವ ಆಚರಿಸಿದ್ದಾರೆ. ಯಾವುದೇ ಕಡೆಗಳಲ್ಲಿ ಲಾಠಿ ಚಾರ್ಜ್ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ಅವರು ಸ್ಪಷ್ಟನೆ ನೀಡಿದ್ದಾರೆ.