ಕಲಬುರಗಿ: ನಗರದ ಐಡಿಯಲ್ VIITJEE ಮತ್ತು ಸಿಟಿ ಪಿಯು ಕಾಲೇಜಿನಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ಪ್ರಶಸ್ತಿ ಪುರಸ್ಕೃತ ರೆಹಮಾನ್ ಪಟೇಲ್ ಮತ್ತು ರಾಷ್ಟ್ರೀಯ ಲಲಿತಕಲಾ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಅಯಾಜುದ್ದೀನ್ ಪಟೇಲ್ ಅವರನ್ನು ಗುರುವಾರ ಸನ್ಮಾನಿಸಲಾಯಿತು.
ಶಿಕ್ಷಣ ತಜ್ಞ ಮುಜಾಹಿದ್ ಪಾಷಾ ಇಬ್ಬರೂ ಕಲಾವಿದರನ್ನು ಪ್ರಾಂಶುಪಾಲರು ಮತ್ತು ಸಿಬ್ಬಂದಿ ಸಮ್ಮುಖದಲ್ಲಿ ಸನ್ಮಾನಿಸಿದರು. ರೆಹಮಾನ್ ಪಟೇಲ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ 52 ನೇ ವಾರ್ಷಿಕ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಮತ್ತು ಅಯಾಜುದ್ದೀನ್ ಪಟೇಲ್ ಬಹಮನಿ ಇತಿಹಾಸ ಮತ್ತು ನಾಣ್ಯಗಳಲ್ಲಿ ತಮ್ಮ ವಿದ್ವತ್ಪೂರ್ಣ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಇತ್ತೀಚೆಗೆ ಕಲಬುರಗಿಯಲ್ಲಿ ಹೊಸ ಕಲಾ ಗ್ಯಾಲರಿ ಮತ್ತು ವಸ್ತುಸಂಗ್ರಹಾಲಯವನ್ನು ಸ್ಥಾಪಿಸಿರುವುದು ವಿಶೇಷ.