ಕಲಬುರಗಿ| ಕಲಾವಿದ ರೆಹಮಾನ್ ಪಟೇಲ್ ಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ; ಮೇ23ರಂದು ಪ್ರದಾನ

Date:

Share post:

ಕಲಬುರಗಿ: ಕಲಾವಿದ ರೆಹಮಾನ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯಲ್ಲಿ 25,000 ನಗದು ಬಹುಮಾನ ಮತ್ತು ಪ್ರಮಾಣಪತ್ರವಿದೆ.

ಪ್ರಶಸ್ತಿ ಪಡೆದ ಚಿತ್ರಕಲಾ ಪ್ರದರ್ಶನವು ಮೇ 23 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ ನಲ್ಲಿ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ವಿಜೇತರಿಗೆ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬೀ. ನೀಲಮ್ಮರವರು ಪತ್ರದಲ್ಲಿ ತಿಳಿಸಿದ್ದಾರೆ.

ರೆಹಮಾನ್ ಪಟೇಲ್ ಅವರು ಕಳೆದ ಎರಡು ದಶಕಗಳಿಂದ ಸುರಪುರ ಲಘುಚಿತ್ರಕಲೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಲಾರೂಪವು 1773 ರಿಂದ 1858ರವರೆಗೆ ಸುರಪುರ ನಾಯಕರ ಆಳ್ವಿಕೆಯಲ್ಲಿ ಅರಳಿದಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...