ಕಲಬುರಗಿ| ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿ ಉದ್ಘಾಟನೆ

Date:

Share post:

ಕಲಬುರಗಿ: ನಗರದ ಪೂಜಾರಿ ಚೌಕ್ ನಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿಯನ್ನು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಉದ್ಘಾಟನೆ ನೆರವೇರಿಸಿದರು.

ಬಳಿಕ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳನ್ನ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಭಾಗದಲ್ಲಿ ಶಿಕ್ಷಣ ಕ್ರಾಂತಿಯಾಗಬೇಕು, ಮಕ್ಕಳು ಉತ್ತಮ ಅಂಕ ಗಳಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಬೆನ್ನೆಲುಬಾಗಿ ನಿಂತು ಸಮಾನತೆ, ಬ್ರಾತೃತ್ವ, ಶಿಕ್ಷಣದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಹೇಳಿದರು.

ಸಂಘದ ಗೌರವ ಅಧ್ಯಕ್ಷ ಅನಿಲಕುಮಾರ್ ಬಿರಾದಾರ್  ಪ್ರಾಸ್ತವಿಕ ಮಾತಾಡಿ ಸಂಘದ ಗುರಿ ಉದ್ದೇಶ ತಿಳಿಸಿದರು.

ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೊಳೆ  ಪದಾಧಿಕಾರಿಗಳಿಗೆ ಆದೇಶ ಪ್ರತಿ ವಿತರಿಸಿ ಸಂಘಟನೆ ಬಲಪಡಿಸಿ ನಮ್ಮ ಭಾಗದಲ್ಲಿ ನೌಕರರ ಹಿತ ರಕ್ಷಣೆ ಮಾಡುವಂತೆ ತಿಳಿಸಿದರು.

ಜಿಲ್ಲಾ ಅಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಮಾತನಾಡಿ, ಸಮಾಜಕ್ಕೆ ಸಹಕಾರಿಯಾಗಲು ಸಂಘಟನೆಗೆ ಬನ್ನಿ, ಶಾಲು, ಹಾರ, ಪದವಿಗಳಿಗಾಗಿ ಬರಬೇಡಿ ಎಂದು ತಿಳಿಸಿದರು.

ಆಳಂದ, ಚಿತ್ತಾಪುರ, ಕಮಲಾಪುರ, ಕಲಬುರಗಿ ಉತ್ತರ ಮತ್ತು ದಕ್ಷಿಣ ತಾಲೂಕಿನ ಅಧ್ಯಕ್ಷರುಗಳಿಗೆ ಸನ್ಮಾನಿಸಿ ತಾಲೂಕ ಸಂಘ ಬಲಪಡಿಸಲು ಕೋರಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಶ್ರೀನಿವಾಸ್ ಗುತ್ತೇದಾರ್, ಅಂಬಿಕಾ ತಡಕಲ್, ಹೈದರ್ ಅಲಿ,  ಅಣವೀರಪ್ಪ ಯಾಕಾಪುರ್, ಗಂಗಾಧರ್ ಮ್ಯಾಕೇರಿ, ಪ್ರಭು  ಹಾಗೂ ತಾಲೂಕಿನ ಪದಾಧಿಕಾರಿಗಳು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...