ಕಲಬುರಗಿ| ಕಾಲ್ತುಳಿತಕ್ಕೆ ಕಾಂಗ್ರೆಸ್ ಸರಕಾರವೇ ನೇರಹೊಣೆ: ಮರತೂರಕರ್ ಆರೋಪ

Date:

Share post:

ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್‌ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ. ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ  ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ವಹಿಸಬೇಕಿತ್ತು. ಈಗ ಆಗಿರುವ ಕಾಲ್ತುಳಿತಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆರೋಪಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬೆಂಗಳೂರಿನಲ್ಲಿ ಬುಧವಾರ ನಡೆದ ಆರ್‌ಸಿಬಿ ತಂಡದ ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿಯಾದ ಘಟನೆಗೆ ರಾಜ್ಯ ಸರಕಾರವೇ ನೇರ ಹೊಣೆ ಹೊರಬೇಕು. ಇಷ್ಟು ಅವಸರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಬಂದ ಜನರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದೆ ಈ ಭಯಾನಕ ಘಟನೆಗೆ ಕಾರಣವಾಗಿದೆ ಎಂದರು.

 ಮೃತರ ಕುಟುಂಬಕ್ಕೆ ಘೋಷಣೆ ಮಾಡಿದ ಪರಿಹಾರದ ಮೊತ್ತ ಹೆಚ್ಚಿಸಬೇಕು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

ಕಲಬುರಗಿ: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಈದುಲ್ ಅಝ್ ಹಾ (ಬಕ್ರೀದ್)...

ಕಲಬುರಗಿ | ಗೋದುತಾಯಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಕಲಬುರಗಿ : ಮಾನವ ಸಂತೋಷ, ಮೋಜು ಮಸ್ತಿಗಾಗಿ ಪರಿಸರವನ್ನು ಮನಬಂದoತೆ ಹಾಳು...

ಕಲಬುರಗಿ| ಆರ್.ಸಿ.ಬಿ ವಿಜಯೋತ್ಸವದಲ್ಲಿ 11 ಮಂದಿಯ ಸಾವಿಗೆ ಸರ್ಕಾರವೇ ಕಾರಣ: ಬಿಜೆಪಿ ಆಕ್ರೋಶ

ಕಲಬುರಗಿ: ತರಾತುರಿಯಲ್ಲಿ ಆರ್.ಸಿ.ಬಿ ವಿಜಯೋತ್ಸವ ಆಯೋಜಿಸಿ 11 ಜನರ ಸಾವಿಗೆ ಕಾರಣವಾಗಿದೆ....

ಕಲಬುರಗಿ| ಸೈನಿಕ ಶಾಲೆಗೆ ಮೂಲಸೌಕರ್ಯಕ್ಕೆ ಸರಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ...