ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ. ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ವಹಿಸಬೇಕಿತ್ತು. ಈಗ ಆಗಿರುವ ಕಾಲ್ತುಳಿತಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬೆಂಗಳೂರಿನಲ್ಲಿ ಬುಧವಾರ ನಡೆದ ಆರ್ಸಿಬಿ ತಂಡದ ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿಯಾದ ಘಟನೆಗೆ ರಾಜ್ಯ ಸರಕಾರವೇ ನೇರ ಹೊಣೆ ಹೊರಬೇಕು. ಇಷ್ಟು ಅವಸರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಬಂದ ಜನರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದೆ ಈ ಭಯಾನಕ ಘಟನೆಗೆ ಕಾರಣವಾಗಿದೆ ಎಂದರು.
ಮೃತರ ಕುಟುಂಬಕ್ಕೆ ಘೋಷಣೆ ಮಾಡಿದ ಪರಿಹಾರದ ಮೊತ್ತ ಹೆಚ್ಚಿಸಬೇಕು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.