ಕಲಬುರಗಿ| ಕೊಲೆ ಆರೋಪಿಯ ಭೀಕರ ಹತ್ಯೆ; ಮತ್ತೊಂದೆಡೆ ಯುವಕನಿಗೆ ಮಾರಣಾಂತಿಕ ಹಲ್ಲೆ

Date:

Share post:

ಕಲಬುರಗಿ: ಗುರುವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕೊಲೆ ಆರೋಪಿಯ ಬರ್ಬರ ಹತ್ಯೆಯಾಗಿದ್ದು, ಇನ್ನೊಂದೆಡೆ ಯುವಕನೋರ್ವ ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಡಿ ದರ್ಗಾದ ಸಮೀಪ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ನಡೆಸಿದ ದಾಳಿಯಲ್ಲಿ ಕೊಲೆ ಆರೋಪಿಯೊಬ್ಬ ಭೀಕರವಾಗಿ ಹತ್ಯೆಯಾಗಿದ್ದಾನೆ.

 

ಕಲಬುರಗಿ ನಗರದ ಮಿಲ್ಲತ್ ನಗರದ ನಿವಾಸಿ ನಜಮುದ್ದೀನ್ ಅಬ್ದುಲ್ ಸತ್ತಾರ್ (44) ಮೃತ ಆರೋಪಿ ಎಂದು ತಿಳಿದುಬಂದಿದೆ.

ಕೊಲೆಯಾದ ನಜಮುದ್ದೀನ್, ಕೆಲವು ತಿಂಗಳ ಹಿಂದಷ್ಟೇ ರೌಡಿಶೀಟರ್ ಆಗಿದ್ದ ಖಲೀಲ್ ಎಂಬಾತನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ 4ನೆಯ ಆರೋಪಿಯಾಗಿ ಜೈಲು ಸೇರಿದ್ದ. ಕೆಲವು ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬoದಿದ್ದ ನಜಮುದ್ದೀನ್ ಈಗ ಶೇಡಿಗೆ ಬಲಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇನ್ನೊಂದು ಕಡೆ ರೋಜಾ ಪೊಲೀಸ್ ಠಾಣೆಯ ವ್ಯಾಪ್ತಿಯ ಇಸ್ಲಾಮಾಬಾದ್ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮಹೀಬೂಬ್ ನಗರದ ನಿವಾಸಿ ಅಬ್ದುಲ್ ರಹೀಂ ಅಬ್ಬಾಸ್ ಅಲಿ (23) ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕಾಗಿ ಅಬ್ದುಲ್ ರಹೀಂ ಮೇಲೆ ಹಾಗರಗಾ ಕ್ರಾಸ್ ಸಮೀಪದ ನಿವಾಸಿ ಎಂ.ಡಿ ಇಸ್ಮಾಯಿಲ್ ಅಹ್ಮದ್ ಅಲಿ ಮತ್ತಿತರರು ಸೇರಿ ಹಲ್ಲೆ ನಡೆಸಿದ್ದಾರೆಂದು ಪೋಲಿಸ್ ಮೂಲಗಳು ತಿಳಿಸಿವೆ.

ಪ್ರತ್ಯೇಕ ಘಟನೆಗಳಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Share post:

spot_imgspot_img

Popular

More like this
Related

ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ...

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ...

ಕಲಬುರಗಿ| ವರ್ತಮಾನದ ವಿಷಯಗಳೇ ಕಥಾ ವಸ್ತುವಾಗಬೇಕು: ಡಾ. ಲೋಕಾಪೂರ

ಕಲಬುರಗಿ : ಕನ್ನಡ ಕಥಾ ರಚನೆಯಲ್ಲಿ ತೊಡಗಿರುವ ಕಥೆಗಾರರು ವರ್ತಮಾನದ ನೈಜ...

ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ...