ಕಲಬುರಗಿ| ಕೋವಿಡ್-19: ಜಿಲ್ಲೆಯ ಸಾರ್ವಜನಿಕರು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿ.ಸಿ ಸೂಚನೆ

Date:

Share post:

ಕಲಬುರಗಿ: 2025ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ. ಈ ಕುರಿತು ಆರೋಗ್ಯ ಇಲಾಖೆಯಿಂದ ನೀಡಲಾದ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

 

ರಾಜ್ಯದಲ್ಲಿ 2025ರ ಜನವರಿಯಿಂದ ಮೇ 26 ರವರೆಗೆ ಒಟ್ಟು 135 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 80 ಪ್ರಕರಣಗಳು ಸಕ್ರೀಯವಾಗಿರುತ್ತವೆ ಹಾಗೂ ಒಂದು ಮರಣದ ಪ್ರಕರಣ ವರದಿಯಾಗಿರುತ್ತದೆ. ಈಗಾಗಲೇ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 20 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 10 ಸಾಮಾನ್ಯ ಹಾಸಿಗೆಗಳು, 05 ಹೆಚ್.ಡಿ.ಯು ಮತ್ತು 05 ಐ.ಸಿ.ಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳುಳ್ಳ ರೋಗಿಗಳಿಗೆ ಹೋಮ ಐಸೋಲೇಷನ ಮಾಡಲಾಗುವುದು ಹಾಗೂ ತೀವ್ರತರದ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.

 

ಶೀತ, ನೆಗಡಿ, ಜ್ವರ ಇರುವ ತಮ್ಮ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾರ್ವಜನಿಕರು ಆಗಾಗೆ ಸಾಬೂನಿನಿಂದ ಅಥವಾ ಸೈನಿಟೈಸರ್‍ ನಿಂದ ಕೈ ತೊಳೆಯಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗೆಹೋಗಿ ಚಿಕಿತ್ಸೆ ಪಡೆಯಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭೀಣಿ ಸ್ತ್ರೀಯರಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

 

ರಾಜ್ಯದ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಗರ್ಭೀಣಿಯರು, ಮಕ್ಕಳು, ವೃದ್ದರಲ್ಲಿ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ್-19 ನ ಪರೀಕ್ಷೆ ಮಾಡಲಾಗುತ್ತದೆ. ಕೋವಿಡ್-19 ಸೋಂಕನ್ನು ದೃಢಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಲಬುರಗಿ (VRDL GIMS) ಜಿಮ್ಸ್ ಪ್ರಯೋಗಾಶಾಲೆ ನಿಗದಿಪಡಿಸಿದ್ದು, ಆದ್ದರಿಂದ ಜಿಲ್ಲೆಯ ಎಲ್ಲಾ ಮಾದರಿಗಳು ಅಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ...

ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ...

ಕಲಬುರಗಿ| ಬಿ.ಇಡಿ ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗಕ್ಕೆ ಸರ್ಕಾರ ಅನುಮತಿ: ನಮೋಶಿ ಹರ್ಷ

ಕಲಬುರಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು...

ಕಲಬುರಗಿ| ವಿವಿಧ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ

ಕಲಬುರಗಿ: 2025-26ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ...