ಕಲಬುರಗಿ: ಕೇಂದ್ರ ಕಾರಾಗೃಹ ವೀಕ್ಷಕರಾದ ಬಾಲನಗೌಡ ಮತ್ತು ಭೀಮರೆಡ್ಡಿ ಇವರುಗಳು ಶಿವಮೊಗ್ಗದಲ್ಲಿ ಮೂರು ದಿನಗಳ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ, ಓಟ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ಮುಖ್ಯಸ್ಥರಾದ ಡಾ. ಅನಿತಾ ಆರ್. ಅವರು ವಿಜೇತರಾದ ವೀಕ್ಷಕರುಗಳಿಗೆ ಸನ್ಮಾನಿಸಿದರು.
ನಂತರ ಮಾತನಾಡುತ್ತಾ, ತಾವುಗಳು ಮುಂದೆಯೂ ಕೂಡಾ ಇದೇ ರೀತಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ, ಇದಕ್ಕೆ ಇಲಾಖೆ ವತಿಯಿಂದ ತಮಗೆ ಸಂಪೂರ್ಣ ಬೆಂಬಲವಿದೆ, ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ, ತಾವುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ವಿಜಯಪತಾಕೆಯನ್ನು ಹಾರಿಸಿ ಕಾರಾಗೃಹ ಇಲಾಖೆಯ ಮತ್ತು ಕರ್ನಾಟಕ ರಾಜ್ಯದ ಕೀರ್ತಿಯನ್ನು ಎಲ್ಲೆಡೆ ಪಸರಿಸಿರಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಡಳಿತ ಅಧಿಕಾರಿಯಾದ ಭೀಮಾಶಂಕರ ಡಾಂಗೆ, ಶಿಕ್ಷಕ ನಾಗರಾಜ ಮೂಲಗೆ, ಜೈಲರ್ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್, ಮುಖ್ಯ ವೀಕ್ಷಕರರುಗಳಾದ ಶ್ರೀನಿವಾಸ ಭಜಂತ್ರಿ, ಮಹೇಶ್ ಪಾಟೀಲ್, ಶ್ರೀಕಾಂತ್ ರಂಜೇರಿ, ಬಂಡೆಪ್ಪ ಬಡಿಗೇರ್, ಹಾಗೂ ಬಿ.ಪಿ ಕಾಳಿಂಗ್ ಇತರರು ಭಾಗವಹಿಸಿ ಶುಭ ಕೋರಿದರು ಹಾಗೂ ಎಲ್ಲಾ ಕಛೇರಿ ಅಧಿಕಾರಿ/ ಸಿಬ್ಬಂದಿಗಳು ಶುಭ ಹಾರೈಸಿದರು.