ಕಲಬುರಗಿ| ಗೌರವಧನ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Date:

Share post:

ಕಲಬುರಗಿ: ಮುಖ್ಯಮಂತ್ರಿ ಘೋಷಿಸಿದ್ದ ಗೌರವಧನ ಹಾಗೂ ಕೇಂದ್ರದ ಪ್ರೋತ್ಸಾಹಧನ ಸೇರಿಸಿ ಮಾಸಿಕ 10,000 ಗೌರವಧನ ನೀಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯ ರಾಜ್ಯವ್ಯಾಪಿ ನಡೆಯುತ್ತಿರುವ ಮೂರು ದಿನಗಳ ಕಾಲದ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೊದಲ ದಿನದಂದು ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಗೌರವಾಧ್ಯಕ್ಷ ವಿ.ಜಿ ದೇಸಾಯಿ, ಕಳೆದ ಜನವರಿ ತಿಂಗಳಲ್ಲಿ ಆಶಾ ಕಾರ್ಯಕರ್ತೆಯರ ಕನಿಷ್ಠ ಗೌರವಧನವನ್ನು 10 ಸಾವಿರಕ್ಕೆ ಹೆಚ್ಚಿಸುವುದಾಗಿ ಹೇಳಿದ್ದರು. ಹಾಗಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಹೋರಾಟವನ್ನು ಕೈಬಿಟ್ಟು ವಿಜಯೋತ್ಸವ ಆಚರಿಸಿದೆವು. ಆದರೆ ಈಗ 7 ತಿಂಗಳು ಕಳೆದರೂ ಕೊಟ್ಟ ಮಾತಿನಂತೆ ಸರಕಾರ ನಡೆದುಕೊಂಡಿಲ್ಲ. ಈಗಲಾದರೂ ಕೂಡಲೇ ಕ್ರಮ ಕೈಗೊಂಡು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

 

ಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗೀತಾ ಬಡಿಗೇರ್ ಮಾತನಾಡಿ, ಶಿಕ್ಷಣದ ಆಧಾರದ ಮೇಲೆ ಆಶಾ ಕಾರ್ಯಕರ್ತೆಯರನ್ನು ಕೈಬಿಡುವುದಾಗಿ ಹೇಳುತ್ತಿದ್ದಾರೆ, ಮೊದಲು ತೆಗೆದುಕೊಳ್ಳುವಾಗ ಶಿಕ್ಷಣ ಬೇಕಾಗಿರಲಿಲ್ಲ, ಈಗ್ಯಾಕೆ ಶಿಕ್ಷಣ ಬೇಕು ಅಂತಿದ್ದಾರೆ? ಎಂದು ಪ್ರಶ್ನಿಸಿದ ಅವರು, ಆಶಾ ಕಾರ್ಯಕರ್ತೆಯರ ಕಷ್ಟಗಳು ತುಂಬಾ ಇವೆ, ಅದನ್ನ ಸಿಎಂ ಅವರು ಗಮನ ಹರಿಸಬೇಕು, ಇಲ್ಲದಿದ್ದರೆ ನಾವು ಅಹೋರಾತ್ರಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

oplus_0
oplus_0
oplus_0

ಸಿಎಂ ಘೋಷಿಸಿದಂತೆ ಮಾಸಿಕ ಕನಿಷ್ಠ ಗೌರವಧನ 10 ಸಾವಿರಕ್ಕೆ ಹೆಚ್ಚಿಸುವುದು, 2025ರ ಬಜೆಟ್ ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ 1 ಸಾವಿರ ರೂಪಾಯಿ ಪ್ರೋತ್ಸಾಹಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ನೀಡಿ, ಜನಸಂಖ್ಯೆ ಆಧಾರದಲ್ಲಿ ಆಶಾ ಕಾರ್ಯಕರ್ತೆಯರನ್ನು ತೆಗೆಯುವುದನ್ನು ಕೈಬಿಡಬೇಕು, ವಾರದ ರಜೆ ಘೋಷಣೆ, ಪಶ್ಚಿಮ ಬಂಗಾಳ ಮಾದರಿಯಲ್ಲಿ ಕಾರ್ಯಕರ್ತೆಯರಿಗೆ ಇಡುಗಂಟು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಶಿವಲಿಂಗಮ್ಮ ನಂದೂರ್, ಜಿಲ್ಲಾ ಕಾರ್ಯದರ್ಶಿ ಗೀತಾ ಬಡಿಗೇರ್, ಜಯಶ್ರೀ ದಂಡೋತಿ, ವಿಜಯಲಕ್ಷ್ಮಿ ಕಮಲಾಪುರ್, ಲಕ್ಷ್ಮಿ ತಳವಾರ್ ಚಿಂಚೋಳಿ, ನಾಗವೇಣಿ, ಸುನಂದಾ, ಕವಿತಾ ಅಫಜಲಪೂರ್, ಮಲ್ಲಮ್ಮ ಹಿರೋಳಿ, ಮಂಜುಳಾ ಯಳಸಂಗಿ, ಶರಣಮ್ಮ, ಸಂಘಟಕರಾದ ಮಹೇಶ್, ಜಗನ್ನಾಥ್ ಸೇರಿದಂತೆ ಹಲವು ಆಶಾ ಕಾರ್ಯಕರ್ತೆಯರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....