ಕಲಬುರಗಿ| ಜಾತಿಗಣತಿ ವೇಳೆ ಹೃದಯಘಾತದಿಂದ ಶಿಕ್ಷಕ ಸಾವು: 1 ಕೋಟಿ ಪರಿಹಾರಕ್ಕೆ ಆಗ್ರಹ 

Date:

Share post:

ಕಲಬುರಗಿ: ಜಾತಿ ಗಣತಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಹೃದಯಘಾತದಿಂದ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿ ಶಾಲೆಯ ಮುಖ್ಯಗುರು ನಾಗಶೆಟ್ಟಿ ಬಾಸಪಳ್ಳಿ ಮೃತ ಪಟ್ಟಿರು ಘಟನೆ ನಡೆದಿದೆ.

ಚಿಂಚೋಳಿ ತಾಲೂಕಿನ ಬುರಗಪಳ್ಳಿ ಗ್ರಾಮದವರಾದ ನಾಗಶೆಟ್ಟಿ ಅವರು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಶಾಲೆಯ ಖುರ್ಚಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುವಾಗಲೇ ಅಸ್ವಸ್ಥರಾಗಿ ಕುಸಿದು ಬಿದ್ದು, ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸರಕಾರದ ಕೆಲಸ ದಕ್ಷ, ಪ್ರಮಾಣಿಕತೆಯಿಂದ ಮಾಡುತ್ತಿದ್ದ ನಾಗಶೆಟ್ಟಿ ಅವರ ಸಾವು ತಾಲೂಕಿಗೆ ತುಂಬಲಾರದ ನಷ್ಟವಾಗಿದೆ. ಉತ್ತಮ ಶಿಕ್ಷಕನನ್ನು ಕಳೆದುಕೊಂಡ ಶಿಕ್ಷಣ ಇಲಾಖೆ ಹಾಗೂ ತಾಲೂಕು ಬಡವಾಗಿದೆ. ಸ್ವಗ್ರಾಮ ಬುರುಗಪಳ್ಳಿಯ ಸ್ವಂತ ಹೊಲದಲ್ಲಿ ಶುಕ್ರುವಾರ ಅಂತ್ಯಕ್ರಿಯೆ ನಡೆಯಿತು.

ಒಂದು ಕೋಟಿ ಪರಿಹಾರಕ್ಕೆ ಒತ್ತಾಯ:

55 ವರ್ಷ ಮೇಲ್ಪಟ್ಟವರಿಗೆ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬಾರದು ಎನ್ನುವ ಆದೇಶವಿದ್ದರೂ, ಶಿಕ್ಷಕ ನಾಗಶೆಟ್ಟಿ ಅವರನ್ನು ನೇಮಿಸಿಲಾಗಿದೆ. ಒಳ ಮೀಸಲಾತಿ ಜಾತಿಗಣತಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಮುಖ್ಯಗುರು ನಾಗಶೆಟ್ಟಿ ಬಾಸಪಳ್ಳಿ ಅವರ ಕುಟುಂಬಕ್ಕೆ ಸರಕಾರ 1 ಕೋಟಿ ಪರಿಹಾರ ಘೋಷಿಸಬೇಕು ಎಂದು ಅಖಿಲ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ ಘಟಕದ ಅಧ್ಯಕ್ಷ ವಕೀಲ ಶರಣುಪಾಟೀಲ ಮೋತಕಪಳ್ಳಿ ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಕಲಬುರಗಿ| ಬಾಲಕನ ಪೋಷಕರ ಪತ್ತೆಗೆ ಮನವಿ

ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ...

ಕಲಬುರಗಿ: ಜುಲೈ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...