ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

Date:

Share post:

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜುಲೈ ಮಾಸಾಂತ್ಯಕ್ಕೆ ಒಂದು ದಿನದ ಕಲಬುರಗಿ ಜಿಲ್ಲಾ ಎರಡನೇ ಯುವ ಸಾಹಿತ್ಯ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಬಸವಾದಿ ಶರಣರು, ಸೂಫಿ – ಸಂತರ ನೆಲೆವೀಡಾದ ಕಲಬುರಗಿ ನೆಲದಲ್ಲಿ ನಡೆಸಲುದ್ದೇಶಿಸಿರುವ ಈ ಸಮ್ಮೇಳನ ಬಹು ದಿನಗಳ ಕನಸಾಗಿದೆ. ಈ ಭಾಗದಲ್ಲಿ ಅನೇಕ ಕಲಾವಿದರು, ಉದಯೋನ್ಮುಖ ಪ್ರತಿಭಾವಂತ ಬರಹಗಾರರಿದ್ದು, ಅವರಿಗೆ ಸೂಕ್ತ ವೇದಿಕೆಗಳು ಇಲ್ಲದಂತಾಗಿದೆ. ಅನೇಕ ಯುವ ಲೇಖಕರು ಎಲೆಮರೆ ಕಾಯಿಯಂತೆ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮುಕ್ತ ಅವಕಾಶಗಳಿಲ್ಲದ ಪರಿಣಾಮ ಅವರ ಪ್ರತಿಭೆ ಅನಾವರಣಗೊಳ್ಳುತ್ತಿಲ್ಲವಾದ್ದರಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹತ್ತು ಹಲವು ವಿಶಿಷ್ಟ ಮತ್ತು ವೈವಿಧ್ಯಮಯ ಸಾಹಿತ್ಯ ಸಮ್ಮೇಳನಗಳನ್ನು ಕೈಗೊಂಡು ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಛಾಪು ಮೂಡಿಸಿದ್ದು, ಯುವ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸಿದೆ ಎಂದು ಅವರು ವಿವರಿಸಿದ್ದಾರೆ.

ಎಲ್ಲರನ್ನು ಒಗ್ಗೂಡಿಸುವ ಶಕ್ತಿ ನಮ್ಮ ಸಾಹಿತ್ಯಕ್ಕಿದೆ. ಸಾಹಿತ್ಯ-ಸಂಸ್ಕೃತಿಯ ಮೂಲಕ ಸರ್ವರೂ ಒಟ್ಟಾಗಿ ಈ ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟಿ ನಮ್ಮ ಭಾಷೆ ಬೆಳೆಸಬೇಕಾಗಿದೆ. ಆದ್ದರಿಂದ ವರ್ತಮಾನದ ಸಾಹಿತ್ಯ ಕುರಿತು ಚರ್ಚೆ, ಚಿಂತನೆ ಮಾಡುವ ಕಾರ್ಯ ಈ ಸಮ್ಮೇಳನ ಮಾಡಲಿದೆ ಎಂದು ತಿಳಿಸಿದರು.

 

ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿಯ ರಚನೆ, ಸಮ್ಮೇಳನಾಧ್ಯಕ್ಷರ ಆಯ್ಕೆ ಶೀಘ್ರದಲ್ಲಿಯೇ ಮಾಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ, ರಮೇಶ ಡಿ ಬಡಿಗೇರ, ರಾಜಶೇಖರ ಚೌದ್ರಿ, ಡಾ. ರೆಹಮಾನ್ ಪಟೇಲ್, ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಶಿವಾನಂದ ಸುರವಸೆ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಶಕುಂತಲಾ ಪಾಟೀಲ, ಸಿದ್ಧಲಿಂಗ ಜಿ ಬಾಳಿ, ಸಂದೀಪ ಭರಣಿ, ಸುನೀಲ ಇಟಗಿ, ಶಿವಶರಣ ಬಡದಾಳ, ಎಂ ಎನ್ ಸುಗಂಧಿ, ರೇವನಸಿದ್ದಪ್ಪ ಜೀವನಗಿ, ಸೋಮಶೇಖರಯ್ಯಾ ಹೊಸಮಠ, ಸೈಯ್ಯದ್ ನಜೀರುದ್ದಿನ್ ಮುತ್ತವಲಿ, ಸೋಮಶೇಖರ ನಂದಿಧ್ವಜ, ಬಿ.ಎಂ. ಪಾಟೀಲ ಕಲ್ಲೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....