ಕಲಬುರಗಿ: ಜೂನ್ 29 ರಂದು ನಗರದ ಶ್ರೀಮತಿ ಕಸ್ತೂರಿ ಬಾಯಿ ಪಿ ಬುಳ್ಳಾ ಸಾಂಸ್ಕೃತಿಕ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಸಂಸ್ಥಾಪನಾ ದಿನಾಚರಣೆ ಹಾಗೂ ಸಾಮಾನ್ಯ ಸಭೆ ನಡೆಯಲಿದೆ ಎಂದು ಗಂಗವಾಹಿನಿಯ ಕಾರ್ಯಾಧ್ಯಕ್ಷ ಸೈಬಣ್ಣಾ ವಡಗೇರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 11ಗಂಟೆಗೆ ನಡೆಯಲಿರುವ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ “ಸ್ನೇಹ ಶ್ರೀ ಪ್ರಶಸ್ತಿ,,” ಹಾಗೂ ಪ್ರತಿಭಾ ಪುರಸ್ಕಾರವನ್ನು ಪ್ರದಾನ ಮಾಡಲಾಗುತ್ತಿದೆ, ನಂತರ ಸಾಮಾನ್ಯ ಸಭೆಯನ್ನು ನಡೆಸಲಾಗುವುದು ಎಂದಿದ್ದಾರೆ.
ಅದ್ದೂರಿಯಾಗಿ ನಡೆಯುವ ಕಾರ್ಯಕ್ರಮಕ್ಕೆ ಸಂಸ್ಥೆಯ ಸದಸ್ಯರು ಹಾಗೂ ಸಮಾಜದ ಬಂಧುಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.