ಕಲಬುರಗಿ| ತಂಬಾಕು, ಧೂಮಪಾನ ಸೇವನೆಯಿಂದ ಕ್ಯಾನ್ಸರ್ ಗೆ ಯುವಕರೆ ಹೆಚ್ಚು ಬಲಿ: ನ್ಯಾ.ಶ್ರೀನಿವಾಸ ನವಲೆ

Date:

Share post:

ಕಲಬುರಗಿ: ತಂಬಾಕು ಮತ್ತು ಧೂಮಪಾನ ಸೇವನೆಯಿಂದ ಸಮಾಜದಲ್ಲಿ ಹೆಚ್ಚಿನ ಯುವಕರು ಕ್ಯಾನ್ಸರ್ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇದು ವಿಷಾಧನೀಯ ಸಂಗತಿ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ಹೇಳಿದರು.

ಶನಿವಾರದಂದು ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಮತ್ತು ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ಎನ್.ಎಸ್.ಎಸ್. ಘಟಕ ಕಲಬುರಗಿ ಇವರುಗಳು ಸಂಯುಕ್ತಾಶ್ರಯದಲ್ಲಿ “ಮೇ.31 ವಿಶ್ವ ತಂಬಾಕು ರಹಿತ ದಿನಾಚರಣೆ”ಯನ್ನು ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು” ಎಂಬ ದ್ಯೇಯವಾಕ್ಯದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮುಖಾಂತರ ಉದ್ಫಾಟಿಸಿ ಮಾತನಾಡಿದರು.

ಬೆಳೆದ ಮಕ್ಕಳು ದುಶ್ಚಟಗಳಿಗೆ ಬಲಿಯಾದಾಗ ಕುಟುಂಬಗಳು ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಅನೇಕ ನೋವುಗಳನ್ನು ಅನುಭವಿಸುತ್ತಿರುವುದು ಕಣ್ಣಾರೆ ಕಂಡರು ಸಹ ಉಳಿದ ಯುವ ಸಮೂಹ ಎಚ್ಚರಗೊಳ್ಳದಿರುವುದು ದುರದೃಷ್ಟ ಎಂದು ಹೇಳಿದರು.

ಭಾರತದಲ್ಲಿ ತಂಬಾಕು ಉತ್ಪನ್ನವನ್ನು ಮೊದಲಿಗೆ ಪರಿಚಯಸಿದವರು ಪೋರ್ಚಗಿಸರು. ಅವರು ಪರಿಚಯಿಸಿದ ತಂಬಾಕು ಭಾರತೀಯರು ಬೆಳೆಯುವುದಲ್ಲದೇ ಉತ್ಪನ್ನಗಳನ್ನು ಸೇವನೆ ಮಾಡಲು ಆರಂಭಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರದಲ್ಲಿ ಆದ ಬದಲಾವಣೆಯಿಂದ ನಂತರ ದಿನಮಾನಗಳಲ್ಲಿ ತಂಬಾಕಿನ ಉತ್ಪನ್ನಗಳ ಕುರಿತು ಹಲವಾರು ಅಧ್ಯಯನ ಮತ್ತು ಸಂಶೋಧನಾ ವರದಿಗಳಿಂದ ತಂಬಾಕಿನಲ್ಲಿ ಹೆಚ್ಚಿನ ಪ್ರಮಾಣದ ನಿಕೋಟಿನ್ ಅಂಶವಿರುವುದರಿಂದ ಇದು ಆರೋಗ್ಯಕ್ಕೆ ಕ್ಯಾನ್ಸರ್ ಉಂಟುಮಾಡುವ ಹಾನಿಕರ ಉತ್ಪನ್ನ ಎಂದು ವರದಿಗಳು ಮಾಹಿತಿಯನ್ನು ಬಹಿರಂಗ ಪಡಿಸಿದವು.

ನಂತರ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ತಂಬಾಕು, ಸಿಗರೇಟಿನ ಸೇವನೆಯಿಂದಾಗುವ ದುಷ್ಫರಿಣಾಮಗಳ ಕುರಿತು ಉತ್ಪನ್ನಗಳ ಮಾಹಿತಿಯನ್ನು ಹಾಗೂ ಅದರಿಂದಾಗುವ ಸಮಸ್ಯೆಗಳ ಕುರಿತು ಅವುಗಳ ಪಟ್ಟಣದ ಮೇಲೆ ಮುದ್ರಿಸಬೇಕೆಂದು ಸುಪ್ರಿಂ ಕೋರ್ಟ್ ಆದೇಶ ನೀಡಿತು ಎಂದರು.

ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜ್ಞಾನರ್ಜನೆ ಮುಖ್ಯ ದ್ಯೇಯವನ್ನು ಮಾಡಿಕೊಂಡು ಸಮಾಜದಲ್ಲಿ ಏನಾದರೂ ಸಾಧನೆ ಮಾಡಿ ಆರೋಗ್ಯವೇ ಭಾಗ್ಯ ಎಂಬ ಗಾಧೆಯಂತೆ ಪ್ರತಿಯೊಬ್ಬರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪಾ ಖ್ಯಾತನಾಳ ಅವರು ಮಾತನಾಡಿ, ತಂಬಾಕು ಮತ್ತು ಸಿಗರೇಟಿನಂತಹ ಹಾನಿಕರ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಕ್ಯಾನ್ಸರ್ ರೋಗಗಳಿಗೆ ಬಲಿಯಾಗುವ ಸಂಭವವಿರುತ್ತದೆ ಎಂದರು.

ಪ್ರಸುತ್ತ ದಿನಗಳಲ್ಲಿ ಯುವಜನಾಂಗ ತಮ್ಮ ನಟ ನಟಿಯರ ಚಿತ್ರಗಳಿಂದ ಪ್ರೇರೆಪಣೆಗೊಂಡು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ತುಂಭಾ ವಿಷಾಧನೀಯ ಸಂಗತಿಯಾಗಿದ್ದು, ಅದಕ್ಕಾಗಿ ಎಲ್ಲ ಇಲಾಖೆಗಳ ಸಮನ್ವಯ ಸಹಕಾರದಿಂದ ಇದರ ಕುರಿತು ಯುವ ಸಮೂಹದಲ್ಲಿ ಅರಿವು ಮೂಡಿಸುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಮಾಡಬೇಕೆಂದರು.

 

ಕಲಬುರಗಿ ಕೆ.ಪಿ.ಇ. ಸೊಸೈಟಿ ಪ್ರಧಾನ ಕಾರ್ಯದರ್ಶಿಗಳಾದ ಶಾಂತಪ್ಪ ಸೂರನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೌವ್ವನದಲ್ಲಿ ಯಾವುದೇ ಚಟಗಳಿಗೆ ಅಂಟಿಕೊಳ್ಳಬಾರದು ತಂಬಾಕು ಆರೋಗ್ಯಕ್ಕೆ ಹಾನಿಕರ ಎಂದು ತಿಳಿದುಕೊಂಡು ಯುವಜನಾಂಗ ದುಶ್ಚಟಗಳಿಂದ ಮುಕ್ತರಾಗಬೇಕು, ಶಾಲಾ ಕಾಲೇಜುಗಳು ವಿಶ್ವವಿದ್ಯಾಲಯಗಳು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಸಿಗರೇಟ್‍ನ್ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವಜನಾಂಗದವರಿಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

 

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರಾಕೇಶ ಕಾಂಬಳೆ ಮಾತನಾಡಿ, ತಂಬಾಕು ಉತ್ಪನ್ನ ಕಂಪನಿಗಳು, ತಮ್ಮ ಉತ್ಪನ್ನದ ಹೆಚ್ಚಿನ ಮಾರಾಟದ ಆಸೆಗಾಗಿ ಹಲವಾರು ಹಾನಿಕರ ವಸ್ತುಗಳು ಬಳಸಿ ಹೆಚ್ಚಿನ ಪ್ರಮಾಣದಲ್ಲಿ ಜಾಹೀರಾತು ಪ್ರಚಾರ ನೀಡಿ ತಂಬಾಕು ಮಾರಟ ಮಾಡುತ್ತವೆ. ಇದನ್ನು ಸರ್ಕಾರ ತಡೆಯಲು ಕ್ರಮಕೈಗೊಳ್ಳಬೇಕೆಂದು ಪ್ರಸ್ತಾವಿಕವಾಗಿ ಮಾತನಾಡಿದರು.

 

ಇದೇ ಸಂದರ್ಭದಲ್ಲಿ ಕುಮಾರಿ ಆರತಿ ಧನುಶ್ರೀ “ವಿಶ್ವ ತಂಬಾಕು ರಹಿತ ದಿನಾಚರಣೆ” ಅಂಗವಾಗಿ ಪ್ರತಿಜ್ಞೆ ವಿಧಿ ಭೋದಿಸಿದರು

ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಚಂದ್ರಶೇಖರ ಶೀಲವಂತ ಅವರು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಅಲ್-ಬದರ್, ಹೆಚ್.ಕೆ.ಇ, ಇ.ಎಸ್.ಐ. ದಂತ ಮಹಾವಿದ್ಯಾಲಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಸ್ಥಾನ ಗಳಿಸಿದ ಡಾ, ಸೈಯದ್ ಥೈಹೆರ್ ಫಾತಿಮಾ, ದ್ವಿತೀಯ ಡಾ. ಪ್ರಶಾಂತ ಎಸ್, ತೃತೀಯ, ಡಾ. ಸುಷ್ಮಾ ಬಿ.ಎಂ. ಮತ್ತು ಘೋಷಣೆಗಳ ಸ್ಪರ್ಧೇಯಲ್ಲಿ ವಿಜೇತರಾದ ಎನ್.ವಿ.ನೂತನ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ವೇದಿಕೆ ಮೇಲೆ ಕಲಬುರಗಿಯ ವಕೀಲರ ಸಂಘದ ಅಧ್ಯಕ್ಷರಾದ ಎಸ್.ವಿ. ಪಸಾರ್, ತಂಬಾಕು ನಿಯಂತ್ರಣ ಸಲಹೆಗಾರ್ತಿ ಸುಜಾತ ಪಾಟೀಲ, ವಕೀಲ ಅಲ್ಲಾವುದ್ಧಿನ್ ಸಗರ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು. ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಪಂಚಮಸಾಲಿ ಹೋರಾಟದ ವಿರುದ್ಧ ಹಲ್ಲೆ ಮಾಡಿದ್ದನ್ನು ಸರಕಾರ ಮುಚ್ಚಿಹಾಕಲು ಯತ್ನ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಕಲಬುರಗಿ: ಬೆಳಗಾವಿಯಲ್ಲಿ ಮೀಸಲಾತಿ ನೀಡುವಂತೆ ನಡೆಸಿದ ಹೋರಾಟದ ಸಂದರ್ಭದಲ್ಲಿ ದೀಕ್ಷ ಪಂಚಮಸಾಲಿ...

ಕಲಬುರಗಿ| ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

ಕಲಬುರಗಿ: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಈದುಲ್ ಅಝ್ ಹಾ (ಬಕ್ರೀದ್)...

ಕಲಬುರಗಿ| ಕಾಲ್ತುಳಿತಕ್ಕೆ ಕಾಂಗ್ರೆಸ್ ಸರಕಾರವೇ ನೇರಹೊಣೆ: ಮರತೂರಕರ್ ಆರೋಪ

ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್‌ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ...

ಕಲಬುರಗಿ | ಗೋದುತಾಯಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಕಲಬುರಗಿ : ಮಾನವ ಸಂತೋಷ, ಮೋಜು ಮಸ್ತಿಗಾಗಿ ಪರಿಸರವನ್ನು ಮನಬಂದoತೆ ಹಾಳು...