ಕಲಬುರಗಿ | ಬಾವಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳ ಸಾವು!

Date:

Share post:

ಕಲಬುರಗಿ: ಕುರಿ ಕಾಯಲು ಹೊಗಿದ್ದ ಇಬ್ಬರು ಮಕ್ಕಳು ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ಗುರುವಾರ ನಡೆದಿದೆ.

ಕುಶಾಲ್ ಚನ್ನಪ್ಪ (8), ರಾಜು ಚನ್ನಪ್ಪ (14) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಒಂಟಿ ಕಮಾನ್’ಯಿಂದ ಕುರಿ ಕಾಯಲು ಮಿನಿ ವಿಧಾನಸೌದದ ಹತ್ತಿರ ಬಂದಾಗ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರಗಡೆ ತೆಗೆದಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್ಐ ಶ್ರೀಶೈಲ್ ಅಂಬಾಟಿ, ವಿಜಯ ಕುಮಾರ, ಸವಿಕುಮಾರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ...

ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ...

ಕಲಬುರಗಿ| ಬಿ.ಇಡಿ ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗಕ್ಕೆ ಸರ್ಕಾರ ಅನುಮತಿ: ನಮೋಶಿ ಹರ್ಷ

ಕಲಬುರಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು...

ಕಲಬುರಗಿ| ವಿವಿಧ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ

ಕಲಬುರಗಿ: 2025-26ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ...