ಕಲಬುರಗಿ| ಬೈಕ್ ಕವರ್ ನಲ್ಲಿದ್ದ 1.50 ಲಕ್ಷ ಕದ್ದ ಕಳ್ಳರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Date:

Share post:

ಕಲಬುರಗಿ: ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯ ಅನಮೂಲ್ ಹೋಟೇಲ್ ಹತ್ತಿರ ಬೈಕ್’ನ ಕವರ್’ನಲ್ಲಿದ್ದ 1 ಲಕ್ಷ 50 ಸಾವಿರ ರೂಪಾಯಿಯನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಂಜುನಾಥ ಕಾಶಿ ಎಂಬಾತನೇ ಹಣ ಕೇದುಕೊಂಡ ದುರ್ದೈವಿ ಎಂದು ತಿಳಿದುಬಂದಿದೆ.

ಮಂಜುನಾಥ ಕಾಶಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ 1 ಲಕ್ಷ 50 ಸಾವಿರ ರೂ. ತೆಗೆದುಕೊಂಡು ಬೈಕ್ ಮೇಲೆ ಹೋಗುತ್ತಿದ್ದಾಗ, ಹಿಂದುಗಡೆಯಿಂದ ಬೈಕ್ ಮೇಲಿಂದ ಬಂದ ಓರ್ವ ಕಳ್ಳ ನಿಮ್ಮ ಹಣ ಬಿದ್ದಿವೆ ನೋಡಿ ಎಂದು ಹೇಳಿದ ಕೂಡಲೇ ಮಂಜುನಾಥ ಅವರು ಬೈಕ್ ಮೇಲಿಂದ ಇಳಿದು 50 ರೂ. ಮೂರು ನೋಟುಗಳನ್ನು ಎತ್ತಿಕೊಳ್ಳಲು ಹೋಗಿದ್ದಾರೆ. ಎದರುಗಡೆ ನಿಂತಿದ್ದ ಇನ್ನೂ ಇಬ್ಬರು ಕಳ್ಳರ ಪೈಕಿ ಓರ್ವ ಕಳ್ಳ ಹಣವನ್ನು ತೆಗೆದುಕೊಂಡು ಬೈಕ್ ಮೇಲೆ ಕುಳಿತು ಪರಾರಿಯಾಗಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಸವಿಕುಮಾರ, ಬಸವರಾಜ, ರವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ...

ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ...

ಕಲಬುರಗಿ| ಬಿ.ಇಡಿ ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗಕ್ಕೆ ಸರ್ಕಾರ ಅನುಮತಿ: ನಮೋಶಿ ಹರ್ಷ

ಕಲಬುರಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು...

ಕಲಬುರಗಿ| ವಿವಿಧ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ

ಕಲಬುರಗಿ: 2025-26ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ...