ಕಲಬುರಗಿ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಗೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.
ಹಣಮಂತ (18) ಮೃತಪಟ್ಟ ಯುವಕ, ಲಕ್ಷ್ಮಣ್ ಹಲಕರ್ಟ್ ಎಂಬಾತನಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಗಾಯಾಳುವನ್ನು ತಕ್ಷಣವೇ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಣಮಂತ ಮತ್ತು ಇನ್ನೊಬ್ಬ ಯುವಕ ಲಕ್ಷ್ಮಣ ಹಲಕರ್ಟ್ ಅವರು ಸಂಕನೂರಿನಿಂದ ನಾಲವಾರ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿದೆ.
ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.