ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದ ದುರ್ದೈವಿಗಳೆಂದು ಎಂದು ಗುರುತಿಸಲಾಗಿದೆ.
ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.