ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮಣ್ಣಿನ ಮನೆ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ನಡೆದಿದೆ.
ಗುಡೂರ ಗ್ರಾಮದ 11 ವರ್ಷದ ಬಾಲಕ ಚಂದ್ರು ಶಿವಪ್ಪ ಮೃತಪಟ್ಟಿದ್ದು, 60 ಅಜ್ಜಿ ಭಾಗಮ್ಮ ಎಂಬುವವರಿಗೆ ಗಂಭೀರ ಗಾಯವಾಗಿವೆ. ಗಾಯಗೊಂಡ ವೃದ್ಧೆಯನ್ನು ಕಲಬುರಗಿ ಆಸ್ಪತ್ರೆಗೆ ಚಿಕುತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.