ಕಲಬುರಗಿ: ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾನಗರ ತಾಂಡಾದಲ್ಲಿ ಮನೆ ಕುಸಿತ ಕಂಡು ಅಪಾರ ಹಾನಿಯಾಗಿದೆ. ಕೂಡಲೇ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಚಿಂಚೋಳಿ ಘಟಕದ ಅಧ್ಯಕ್ಷ ಲಿಂಬಾಜಿ ಚವಾಣ್ ಆಗ್ರಹಿಸಿದ್ದಾರೆ.
ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಲಿಂಗಾನಗರ ತಾಂಡಾದ ಅನುಷಾ ಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದಿದ್ದು, ಈ ಘಟನೆಯಿಂದಾಗಿ ಕುಟುಂಬದವರಿಗೆ ದಿಕ್ಕುತೋಚದಂತೆ ಆಗಿದೆ. ಕೂಡಲೇ ಸಂತ್ರಸ್ತರ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಲಿಂಬಾಜೀ, ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ,