ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಸುಮಾರು 3 ಎಕರೆ ಜಮೀನು ಹೊಂದಿರುವ ರೈತ ಬೆಳೆ ಸಾಲ ಮಾಡಿಕೊಂಡಿದ್ದ. ಆದರೆ ಬೆಳೆ ಮಳೆಯಿಂದ ನಷ್ಟವಾಗಿದೆ.

ಫರಹತಾಬಾದ್ ಹೋಬಳಿ ವ್ಯಾಪ್ತಿಯ ಕವಲಗಾ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ಹಣಮಂತ ತಂದೆ ಬಸವರಾಜ ಮೊಸಂಡಿ (35) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ರೈತ 3 ಎಕರೆ ಜಮೀನು ಹೊಂದಿದ್ದು, ಫರಹತಬಾದ್ ಬ್ಯಾಂಕ್ ಆಫ್ ಬರೋಡ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 2 ಲಕ್ಷ ರೂ. ಬೆಳೆ ಸಾಲ ಮಾಡಿದ್ದ. ಕೃಷಿಗಾಗಿ ಖಾಸಗಿ ಸಾಲ 35,0000 ಸೇರಿ ಒಟ್ಟು ಏಳುವರೆ ಲಕ್ಷ ಸಾಲ ಮಾಡಿಕೊಂಡಿದ್ದ.

ಸದ್ಯ ಹತ್ತಿ ಮತ್ತು ತೊಗರಿ ಬೆಳೆದಿದ್ದ. ಆದರೆ ಅತಿಯಾದ ಮಳೆ ನೀರಿನಿಂದ ಬೆಳೆ ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೈತ ಒಂದು ಗಂಡು ಮಗು, ಪತ್ನಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಫರಹತಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮ್ಮಶೆಟ್ಟಿ, ರಾಯಪ್ಪ ಹುರಮುಂಜಿ ಆಗ್ರಹಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11...

ಕಲಬುರಗಿ| ಡಿಎಚ್ಒ ಶರಣಬಸಪ್ಪ ಕ್ಯಾತನಾಳ ಅವರಿಂದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಲೋಕಾರ್ಪಣೆ

ಕಲಬುರಗಿ: ನಗರದ ದುಬೈ ಕಾಲೋನಿ ಹತ್ತಿರ ನೂತನವಾಗಿ ಆರಂಭಗೊಂಡ 100 ಹಾಸಿಗೆಗಳುಳ್ಳ...