ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಈ ಹಿಂದೆ ಹೇಳಿದ್ದನು. ಈ ವೇಳೆ ಪೋಷಕರು ನಾರಾಯಣ ರಾಥೋಡ್ ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲಿಸಿದ್ದರು.
ವಿದ್ಯಾರ್ಥಿ ನಾರಾಯಣನು ತಾಯಿಯನ್ನು ಬಿಟ್ಟಿರಲಾರದೆ ಆತ್ನಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ಧಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.