ಕಲಬುರಗಿ: ವಾಹನವೊಂದು ಬೈಕ್ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.
ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಾದಿಗ ಸಮುದಾಯದ ಮುಖಂಡ ಎನ್ನಲಾಗುತ್ತಿರುವ ಅಂಬಾರಾಯ ಅವರು, ಸದ್ಯ ಕಲಬುರಗಿ ನಗರದ ಹಳೆ ಆರ್.ಟಿ.ಓ ಕ್ರಾಸ್ ಹತ್ತಿರದಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.