ಕಲಬುರಗಿ| ವಿಮಾನ ದುರಂತ ಪ್ರಕರಣಕ್ಕೆ ಕೇಂದ್ರ ಸಚಿವ ರಾಜೀನಾಮೆ ಕೊಡಬೇಕು: ಖಂಡ್ರೆ 

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ಕೊಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು ಒಂದು ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಇನ್ನೂ, ಟಾಟಾ ಗ್ರೂಪ್ ಸಮೂಹದಿಂದ 1 ಕೋಟಿ ಪರಿಹಾರ ಘೋಷಿಸಿದೆ ಆದರೆ ಆ ಪರಿವಾರದವರಿಗೆ ಏಷ್ಟು ಕೋಟಿ ಕೊಟ್ಟರು ಕಡಿಮೆಯೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರು ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....