ಕಲಬುರಗಿ| ವಿಮಾನ ದುರಂತ ಪ್ರಕರಣಕ್ಕೆ ಕೇಂದ್ರ ಸಚಿವ ರಾಜೀನಾಮೆ ಕೊಡಬೇಕು: ಖಂಡ್ರೆ 

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ಕೊಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು ಒಂದು ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಇನ್ನೂ, ಟಾಟಾ ಗ್ರೂಪ್ ಸಮೂಹದಿಂದ 1 ಕೋಟಿ ಪರಿಹಾರ ಘೋಷಿಸಿದೆ ಆದರೆ ಆ ಪರಿವಾರದವರಿಗೆ ಏಷ್ಟು ಕೋಟಿ ಕೊಟ್ಟರು ಕಡಿಮೆಯೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರು ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...