ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್ ಎಂಬುವವರಿಗೆ ಸೇರಿದ ಬಸವೇಶ್ವರ ಕಿರಣಾ ಜನರಲ್ ಸ್ಟೋರ್ ಸುತ್ತಿರುವುದು ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಲೇ, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿದ್ದು, ಪರಿಹಾರಕ್ಕೆ ಅಂಗಡಿ ಮಾಲೀಕರು ಒತ್ತಾಯಿಸಿದ್ದಾರೆ.