ಕಲಬುರಗಿ| ಸಾಮಾಜಿಕ ಜಾಲತಾಣಕ್ಕಿಂತ ಸಮಾಜ ಮುಖ್ಯ: ಸತ್ಯಂಪೇಟೆ

Date:

Share post:

ಕಲಬುರಗಿ: ಯಾವುದೋ ಭ್ರಮಾಲೋಕದಲ್ಲಿ ಮುಳುಗಿ ಗೊಂದಲದ ಗೂಡಾಗಿರುವ ಇಂದಿನ ಯುವಕರು ಸಂವಿಧಾದ ರಕ್ಷಣೆಗೆ ಮುಂದಾಗಬೇಕು ಎಂದು ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಹೇಳಿದರು.

ನಗರದ ಹೊರ ವಲಯದಲ್ಲಿರುವ ಪಂಚಾಯತ್ ರಾಜ್ ಇಲಾಖೆಯ ಅಬ್ದುಲ್ ನಜೀರ್ ಸಾಬ್ ತರಬೇತಿ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ 4ನೇ ದಿನದ ತರಬೇತಿ ಕಾರ್ಯಕ್ರಮದಲ್ಲಿ ಸಂವಿಧಾನ‌ ಮತ್ತು ಮಾಧ್ಯಮ ವಿಷಯ ಕುರಿತು ಮಾತನಾಡಿದ ಅವರು, ಪ್ರಬಲ ಮಾಧ್ಯಮವಾಗಿ ಬೆಳೆಯುತ್ತಿರುವ ಸಾಮಾಜಿಕ ಜಾಲತಾಣ ನೆಚ್ಚಿಕೊಂಡಿರುವ ಯುವಕರಿಗೆ ಸಮಾಜ ಮುಖ್ಯವಾಗಬೇಕು ಎಂದು ಕರೆ ನೀಡಿದರು.

ಬಸವಣ್ಣನವರು ಕಳಬೇಡ, ಕೊಲಬೇಡ ಎಂಬ ವಚನದ ಮೂಲಕ ಸಾರ್ಥಕ ಬದುಕಿಗೆ ಸಪ್ತ ಸೂತ್ರಗಳನ್ನು ಹೇಳಿದರೆ, ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತೀಯರ ಬದುಕಿಗೆ ಘನತೆ ತಂದು ಕೊಟ್ಟರು ಎಂದು ಅಭಿಪ್ರಾಯಪಟ್ಟರು.

ಸಂವಿಧಾನದ ರಕ್ಷಣೆಯಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಾಕಷ್ಟು ಜವಾಬ್ದಾರಿಯಿದ್ದು, ಸಂವಿಧಾನದ ಓದು ಮತ್ತು ಅನುಸರಣೆ ಬಹಳ ಅಗತ್ಯ ಎಂದು ಅವರು ಪ್ರತಿಪಾದಿಸಿದರು.

ಅಧ್ಯಕ್ಷತೆ ವಹಿಸಿದ್ದ ತರಬೇತಿ ಕೇಂದ್ರದ ಹಿರಿಯ ಕಾರ್ಯಕ್ರಮಾಧಿಕಾರಿ ನಾಗೇಶ ಹರಳಯ್ಯ ಮಾತನಾಡಿ, ಸಂವಿಧಾನವನ್ನು ಕೇವಲ ಶಾಸನವನ್ನಾಗಿ ನೋಡದೆ, ಸಂವಿಧಾನವನ್ನು ಮೌಲ್ಯವಾಗಿ ನೋಡಬೇಕು ಎಂಬ ದಿಸೆಯಲ್ಲಿ ಶಿಕ್ಷಣ ಮತ್ತು ಸಂವಿಧಾನ, ಸಂವಿಧಾನ ಮತ್ತು ಲಿಂಗ ಸಮಾನತೆ, ಸಂವಿಧಾನ ಮತ್ತು ಮಾಧ್ಯಮ ಎಂಬಿತ್ಯಾದಿ ವಿಷಯಗಳ ಮೂಲಕ ಯುವಕರಲ್ಲಿ ಜಾಗ್ರತೆ ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ತರಬೇತಿ ಕೇಂದ್ರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....