ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಜರುಗಿದೆ.
ಅಕ್ರಮಪಾಶಾ ಶಬ್ಬಿರಮಿಯ್ಯ ನೈಕೋಡಿ (28) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.
ಅಕ್ರಮಪಾಶ, ತನ್ನ ಜಮೀನಿನಲ್ಲಿ ಸಾಲ ಮಾಡಿ ಬೆಳೆದಿದ್ದ ಬೆಳೆಗಳು ಸರಿಯಾದ ದರ ಸಿಗದೆ ಪ್ರತಿ ನಷ್ಟಕ್ಕೆ ಸಿಲುಕಿದ್ದಾರೆ.ಇದರಿಂದಾಗಿ ಜಿಗುಪ್ಸೆಗೊಂಡ ರೈತ ಹೊಲದಲ್ಲಿ ನೇಣು ಬಿಗಿದುಕೊಂಡಿದ್ದಾನೆ.
ಈ ಬಗ್ಗೆ ಕಾಳಗಿ ತಾಲ್ಲೂಕಿನ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.