ಕಲಬುರಗಿ: ನಗರದ ಸೇಡಂ ರಸ್ತೆಯ ಭಾವಸಾರ ನಗರದಲ್ಲಿರುವ ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಕಾರ್ಯದರ್ಶಿಗಳಾದ ನರೇಶ ತಾಂದಳೆ ಯವರು ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿ ಸುನೀಲ್ ಜಿಂದೆ, ಪ್ರಾಂಶುಪಾಲರಾದ ಡಾ.ಗೀತಾ.ಪಿ.ಮೋರೆ, ಮೇಲ್ವಿಚಾರಕರಾದ ಅರುಣಾ ಗಡಾಳೆ, ಎನ್ ಎಸ್ ಎಸ್ ಸಂಯೋಜನಾಧಿಕಾರಿ ವಸಂತಕುಮಾರ್ ರಾಠೋಡ, ವ್ಯವಸ್ಥಾಪಕ ರಮೇಶ ಯಾಳಗಿ ಬೋಧಕ/ಬೋಧಕೇತರ ಸಿಬ್ಬಂದಿಗಳು ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.