ಪ್ರಿಯಾಂಕ್ ಖರ್ಗೆಯಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಶೂನ್ಯ: ಡಾ. ಸುಧಾ ಆರ್ ಹಾಲಕಾಯಿ

Date:

Share post:

ಕಲಬುರಗಿ: ಕಳೆದ ಕೆಲವು ದಿನಗಳಿಂದ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿಯಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುತ್ತದೆ ಎಂದು ಅಂದುಕೊಳ್ಳುವಂಥದ್ದು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಕರ್ನಾಟಕ ರಾಜ್ಯ ವಕ್ತಾರರಾದ ಡಾ. ಸುಧಾ ಹಾಲಕಾಯಿ ಹೇಳಿದ್ದಾರೆ.

ಬಂಡವಾಳ ಹರಿದು ಬರುವಂಥದ್ದು- ಆ ಪ್ರದೇಶದಲ್ಲಿ ಇರುವಂತಹ ಮಾನವ ಸಂಪನ್ಮೂಲ, ವಾತಾವರಣ, ಉದ್ಯೋಗಕ್ಕೆ ಮತ್ತು ಉದ್ಯಮಕ್ಕೆ ಅಗತ್ಯವಿರುವಂತಹ ಪರಿಸರ, ಸರಕಾರದ ಪ್ರೋತ್ಸಾಹ- ಈ ನಾಲ್ಕು ಸಂಗತಿಗಳನ್ನು ಆಧರಿಸಿ ರಾಜ್ಯಕ್ಕೆ ಬಂಡವಾಳ ಹರಿದು ಬರುವುದು ಸಹಜ. ಆದರೆ ಇಲ್ಲಿ ಕರ್ನಾಟಕದ ಇವತ್ತಿನ ಪರಿಸ್ಥಿತಿಯಲ್ಲಿ- ಅಂದರೆ ಒಂದು ಭ್ರಷ್ಟ ಸರಕಾರ, ಪ್ರತಿಯೊಂದರಲ್ಲೂ ಲಂಚ, ಕಮಿಷನ್ ಇಲ್ಲದೆ ಯಾವುದೇ ಕಾರ್ಯ ನಡೆಯದಂತಹ ಸ್ಥಿತಿ ನಿರ್ಮಾಣವಾಗಿದೆ. ತನ್ನನ್ನು ತಾನೇ ಸರ್ವಜ್ಞ ಎಂದು ಭಾವಿಸಿಕೊಂಡಿರುವ ಪ್ರಿಯಾಂಕ್ ಖರ್ಗೆಯವರು, ಅವರ ಪಕ್ಷದೊಳಗಿನ ಸತ್ಯವನ್ನು ಅನಾವರಣ ಮಾಡಿದರೆ, ಭ್ರಷ್ಟಾಚಾರ ವ್ಯಾಪಕತೆಯ ಬಗ್ಗೆ ಹಿರಿಯರಾದ ಬಿ.ಆರ್. ಪಾಟೀಲರು, ಅಲ್ಲಮ ಪ್ರಭು ಅವರು, ರಾಜು ಕಾಗೆ ಮತ್ತು ಮಿಕ್ಕೆಲ್ಲಾ ಶಾಸಕರು- ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...