ಬೆಂಗಳೂರು-ಬೀದರ್ ವಿಶೇಷ ರೈಲು; ಕಲಬುರಗಿ, ಶಹಾಬಾದ್ ನಲ್ಲಿ ನಿಲುಗಡೆ

Date:

Share post:

ಕಲಬುರಗಿ: ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಕಲಬುರಗಿ ಮತ್ತು ಶಹಾಬಾದ್ ರೈಲ್ವೆ ನಿಲ್ದಾಣಗಳಲ್ಲಿ SMVT ಬೆಂಗಳೂರು-ಬೀದರ್ ವಿಶೇಷ ರೈಲನ್ನು ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸೋಲಾಪುರ ವಿಭಾಗದ ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

      ಈ ವಿಶೇಷ ರೈಲು  SMVT ಬೆಂಗಳೂರು-ಬೀದರ್ (6 ಟ್ರಿಪ್‍ಗಳು) 06589 ವಿಶೇಷ ರೈಲುಗಳು SMVT ಬೆಂಗಳೂರಿನಿಂದ ಮೇ 22, ಮೇ 24 ಹಾಗೂ ಮೇ 26 ರಂದು ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ ಬೀದರಿಗೆ ತಲುಪಲಿವೆ.  ಅದೇ 06590 ವಿಶೇಷ ರೈಲು (3 ಟ್ರಿಪ್‍ಗಳು) ಬೀದರ್‍ನಿಂದ ಮೇ 23, ಮೇ 25 ಮತ್ತು ಮೇ 27 ರಂದು ಮಧ್ಯಾಹ್ನ 12 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 3 ಗಂಟೆಗೆ SMVT ಬೆಂಗಳೂರಿಗೆ ಆಗಮಿಸಲಿದೆ.

     ಈ ವಿಶೇಷ ರೈಲು ಹುಮನಾಬಾದ್, ಕಲಬುರಗಿ, ಶಹಾಬಾದ್, ಯಾದಗಿರಿ, ಕೃಷ್ಣ, ರಾಯಚೂರು, ಮಂತ್ರಾಲಯ ರಸ್ತೆ, ಅದೋನಿ, ಗುಂತಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕ ಮೂಲಕ ಸಂಚರಿಸಲಿದೆ.

        ರೈಲು ಟಿಕೇಟ್ ಬುಕಿಂಗ್ ಮತ್ತಿತರ ಹೆಚ್ಚಿನ ಮಾಹಿತಿಯನ್ನು  www.irctc.co.in  ವೆಬ್‍ಸೈಟ್ ಹಾಗೂ  UTS  ವ್ಯವಸ್ಥೆಯ ಮೂಲಕ, ಈ ವಿಶೇಷ ರೈಲುಗಳ ಸಮಯ ಮತ್ತು ನಿಲುಗಡೆಗಳಿಗಾಗಿ ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in  ಗೆ ಭೇಟಿ ನೀಡಿ ಅಥವಾ NTES ಅಪ್ಲಿಕೇಶನ್ ಡೌನ್‍ಲೋಡ್ ಮಾಡಿಕೊಂಡು ಪಡೆಯಬಹುದಾಗಿದೆ ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ...

ಕಲಬುರಗಿ| ವರ್ತಮಾನದ ವಿಷಯಗಳೇ ಕಥಾ ವಸ್ತುವಾಗಬೇಕು: ಡಾ. ಲೋಕಾಪೂರ

ಕಲಬುರಗಿ : ಕನ್ನಡ ಕಥಾ ರಚನೆಯಲ್ಲಿ ತೊಡಗಿರುವ ಕಥೆಗಾರರು ವರ್ತಮಾನದ ನೈಜ...

ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ...

ಕಲಬುರಗಿ| ಪಂಚಮಸಾಲಿ ಹೋರಾಟದ ವಿರುದ್ಧ ಹಲ್ಲೆ ಮಾಡಿದ್ದನ್ನು ಸರಕಾರ ಮುಚ್ಚಿಹಾಕಲು ಯತ್ನ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಕಲಬುರಗಿ: ಬೆಳಗಾವಿಯಲ್ಲಿ ಮೀಸಲಾತಿ ನೀಡುವಂತೆ ನಡೆಸಿದ ಹೋರಾಟದ ಸಂದರ್ಭದಲ್ಲಿ ದೀಕ್ಷ ಪಂಚಮಸಾಲಿ...