ಕಲಬುರಗಿ| ಭೀಕರ ಅಪಘಾತ ಮೂವರು ಸ್ಥಳದಲ್ಲೇ ಸಾವು!

Date:

Share post:

ಕಲಬುರಗಿ: ಕಬ್ಬಿನ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ನಡುವೆ ಸಂಭವಿಸಿದ ಭೇಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಅಫಜಲಪುರ ಮುಖ್ಯ ರಸ್ತೆಯ ಗೊಬ್ಬುರ (ಬಿ) ಬಳಿ ನಡೆದಿದೆ.

ಕಲಬುರಗಿ ನಗರದ ನಿವಾಸಿಗಳಾದ ವಿನೋದ್ ರವಿರಾವ್ (54), ಅನುಪ್ ಮಾಧವ್ ಬೆಂಗೇರಿ(29) ಮತ್ತು ಗೊಬ್ಬರ್ ಬಿ ಗ್ರಾಮದ ನಿವಾಸಿ ಬೈಕ್ ಸವಾರ ಬಸವರಾಜ್ ಚಿಸ್ತಿ ಎಂಬಾತರೆ ಮೃತಪಟ್ಟರೆಂದು ಗುರುತಿಸಲಾಗಿದೆ.

ಟೆಂಪೊದಲ್ಲಿದ್ದ ಮೃತರಿಬ್ಬರು ಸೇರಿದಂತೆ ಒಟ್ಟು 8 ಮಂದಿ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ದರ್ಶನ ಪಡೆದು ಕಲಬುರಗಿ ಯತ್ತ ತೆರಳುತ್ತಿದ್ದರು. ಈ ವೇಳೆಯೇ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಎಸ್.ಪಿ ಅಡ್ಡೂರು ಶ್ರೀನಿವಾಸಲು ಮತ್ತು ಡಿಎಸ್ಪಿ ಗೊಪಿ ಬಿ.ಆರ್, ಸಿಪಿಐ ಪ್ರಕಾಶ್ ಯಾತನೂರ್, ಸಿಬ್ಬಂದಿ ಸಂಗಣ್ಣ ಸೇರಿದಂತೆ ಗಣಗಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಾಗಿ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...