ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Date:

Share post:

ಕಲಬುರಗಿ: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚಿನ ಅಂಕಗಳನ್ನ ಪಡೆದು ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿಗಳಾದ ಫೌಝಿಯಾ ತರನ್ನುಮ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.

ಶನಿವಾರದಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ 10 ವಿಧ್ಯಾರ್ಥಿಗಳಾದ 625ಕ್ಕೇ 621 ಅಂಕ ಪಡೆದಿರುವ ಶರಣಬಸವೇಶ್ವರ ಫ್ರೌಢಶಾಲೆಯ ಅಂಕಿತ, ಅದೇ ಶಾಲೆಯ ಪೂರ್ವಾಶಾ ಮಾಲಿಪಾಟೀಲ, ಚಿಂಚೋಳಿ ಪಬ್ಲಿಕ್ ಸ್ಕೂಲ್ ರಾಗಿಣಿ ವೀರೇಂದ್ರ ಪಾಟೀಲ್, ಮಹಾಗಾಂವ್ ಕ್ರಾಸ್ ಸಮೀಪದ ಮೌಂಟ್ ವೇವ್ ಇಂಗ್ಲೀಷ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿನಿ ಸೌಮ್ಯ, ಶ್ರೀ ಬಸವ ಗುರುಕುಲ ಫ್ರೌಢಶಾಲೆಯ ಮಹಾಲಕ್ಷ್ಮೀ, 620 ಅಂಕಗಳನ್ನು ಗಳಿಸಿರುವ ಶರಣಬಸವೇಶ್ವರ ಫ್ರೌಢಶಾಲೆಯ ತನುಶ್ರೀ, ಸೇಂಟ್ ಮೇರಿಸ್ ಇಂಗ್ಲೀಷ ಮೀಡಿಯಂ ಸ್ಕೂಲ್ ನ ಪೂರ್ವಿ ಎಂ.ಎಸ್, ಚಿತ್ತಾಪೂರ ಹೆಬ್ಬಾಳ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಕ್ಷತಾ(619), ಎಸ್ ಆರ್ ಎನ್ ಮೆಹ್ತಾ ಇಂಗ್ಲೀಷ ಮೀಡಿಯಂ ಸ್ಕೂಲ್ ನ ಜಿ.ವಿ ದಯಾನಿಧಿ (619) ಅವರು ಸನ್ಮಾನವನ್ನು ಸ್ವೀಕರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ್ ಮದಾನೆ ಹಾಗೂ ವಿದ್ಯಾರ್ಥಿಗಳ ಪಾಲಕರು, ಶಿಕ್ಷಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...