ಕಲಬುರಗಿ| ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ನಿರ್ಧಾರಕ್ಕೆ ನಮೋಶಿ ಸ್ವಾಗತ

Date:

Share post:

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಋತುವಿಗಾಗಿ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದನೆ ನೀಡಿರುವ ನಿರ್ಧಾರಕ್ಕೆ ಸ್ವಾಗತಿಸುವುದಾಗಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2025-26ರ ಮಾರುಕಟ್ಟೆ ಋತುವಿನಲ್ಲಿ ಖಾರಿಫ್ ಬೆಳೆಗಳ MSP ಅನ್ನು ಹೆಚ್ಚಿಸಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು  ಹೆಚ್ಚಳ ಮಾಡಲಾಗಿದೆ ಕಾರೆಳ್ಳು ಬೀಜ (ಕ್ವಿಂಟಲ್‌ಗೆ ರೂ. 820) ನಂತರ ರಾಗಿ (ಕ್ವಿಂಟಲ್‌ಗೆ ರೂ. 596), ಹತ್ತಿ (ಕ್ವಿಂಟಲ್‌ಗೆ ರೂ. 589) ಮತ್ತು ಎಳ್ಳು (ಕ್ವಿಂಟಲ್‌ಗೆ ರೂ. 579) ಶಿಫಾರಸು ಮಾಡಲಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ತೊಗರಿಗೆ ಕೇಂದ್ರ ಸರ್ಕಾರವು 2024-25 ರಲ್ಲಿ 7550 ರೂ ಬೆಂಬಲ ನಿಗದಿಪಡಿಸಲಾಗಿತ್ತು, ರಾಜ್ಯ ಸರ್ಕಾರವು 450 ರೂ ಗಳನ್ನು ಸೇರಿಸಿ ಪ್ರತಿ ಕ್ವಿಂಟಾಲ್ 8000 ರೂಪಾಯಿಗಳನ್ನು ನೀಡಲಾಗುತಿತ್ತು. ಆದರೆ ಈಗ ಕೇಂದ್ರ ಸರ್ಕಾರವು 2013 ರಲ್ಲಿದ್ದ ಬೆಂಬಲ ಬೆಲೆಗಿಂತ ಸುಮಾರು ಶೇ. 86 ರಷ್ಟು ಹೆಚ್ಚಿಗೆ ಮಾಡಿದಂತಾಗಿದೆ, ತೊಗರಿ ನಮ್ಮ ಭಾಗದ ವಾಣಿಜ್ಯ ಬೆಳೆಯಾಗಿರುವುದರಿಂದ ನಮ್ಮ ರೈತರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ.

 2025-26 ನೇ ಸಾಲಿನಲ್ಲಿ ತೊಗರಿ ಬೆಳೆಗೆ ಕೇಂದ್ರ ಸರ್ಕಾರವೆ 8,000 ರೂಪಾಯಿ ನಿಗದಿ ಪಡಿಸಿದ್ದು, ರಾಜ್ಯ ಸರಕಾರವು ಸಹ ಕನಿಷ್ಠ ಇನ್ನೂ 2,000 ರೂಪಾಯಿಗಳನ್ನು ಹೆಚ್ಚಿಸಿ 10000 ರೂಪಾಯಿಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...