ಸರ್ಕಾರಿ ನೌಕರರ ಸಂಘದ ಚುನಾವಣೆ: ಆಳಂದಕ್ಕೆ ಸತೀಶ ಷಣ್ಮುಖ ಅವಿರೋಧವಾಗಿ ಆಯ್ಕೆ!

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ 2024-2029 ರ ಅವಧಿಗೆ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಆಳಂದನ ನೂತನ ಅಧ್ಯಕ್ಷರಾಗಿ ಸತೀಶ ಷಣ್ಮುಖ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅದರಂತೆಯೇ ಕೋಶಾಧ್ಯಕ್ಷರಾಗಿ ಬಸವರಾಜ ಕೆ. ಚಿನಗೇರಾ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ನಾಗೇಂದ್ರ ಗಾಡೆ ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಇವರಿಗೆ ಕರ್ನಾಟಕ ರಾಜ್ಯ ಸರಕಾರಿ ಎನ್. ಪಿ. ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ ತೇಜ್, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣನವರ, ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ, ಕೊಶಾಧ್ಯಕ್ಷರಾದ ವಿಜಯ ಟಿ, ಕಲಬುರಗಿ ಜಿಲ್ಲಾ ಎನ್ ಪಿ ಎಸ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಧರ್ಮರಾಜ ಜವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವನಾಥ ಶಿಂದೆ, ಜಿಲ್ಲಾ ಗೌರವಾಧ್ಯಕ್ಷರಾದ ಅಶೋಕ ಸೊನ್ನ, ಜಿಲ್ಲಾ ಉಪಾಧ್ಯಕ್ಷರಾದ ಮಹೇಶ ನಾಗಮಾರಪಳ್ಳಿ ರಾಚಯ್ಯ ಸ್ವಾಮಿ ಶ್ರೀನಿವಾಸ ಗುತ್ತೇದಾರ, ಲಲಿತಾ ಪಾಟೀಲ, ಕೊಶಾಧ್ಯಕ್ಷರಾದ ಶರಣಪ್ಪ ಶ್ರೀ ಗಿರಿ, ಕಾನೂನು ಸಲಹೆಗಾರರಾದ ಅಣವೀರಪ್ಪ ಯಾಕಾಪುರ, ಜಗದೀಶ ಮೂಲಗೆ , ಗುರುಶರಣ ನಾಗಶೆಟ್ಟಿ, ಸುನೀಲ್ ದತ್ತ ಡಾಂಗೆ, ಕಲಬುರಗಿ ಉತ್ತರ ವಲಯದ ಅಧ್ಯಕ್ಷರಾದ ರೇಣುಕಾ ಎನ್ ಪ್ರಧಾನ ಕಾರ್ಯದರ್ಶಿ ಪಡೆಯಪ್ಪ, ಜಿಲ್ಲಾ ಸಮಸ್ತ ಎನ್ ಪಿ ಎಸ್ ನೌಕರರ ಸಂಘ ಹಾಗೂ ಕಲಬುರಗಿ ಜಿಲ್ಲಾ ಎಲ್ಲಾ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...