ಕಲಬುರಗಿ| ಭೀಕರ ಅಪಘಾತ ಮೂವರು ಸ್ಥಳದಲ್ಲೇ ಸಾವು!

Date:

Share post:

ಕಲಬುರಗಿ: ಕಬ್ಬಿನ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ನಡುವೆ ಸಂಭವಿಸಿದ ಭೇಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಅಫಜಲಪುರ ಮುಖ್ಯ ರಸ್ತೆಯ ಗೊಬ್ಬುರ (ಬಿ) ಬಳಿ ನಡೆದಿದೆ.

ಕಲಬುರಗಿ ನಗರದ ನಿವಾಸಿಗಳಾದ ವಿನೋದ್ ರವಿರಾವ್ (54), ಅನುಪ್ ಮಾಧವ್ ಬೆಂಗೇರಿ(29) ಮತ್ತು ಗೊಬ್ಬರ್ ಬಿ ಗ್ರಾಮದ ನಿವಾಸಿ ಬೈಕ್ ಸವಾರ ಬಸವರಾಜ್ ಚಿಸ್ತಿ ಎಂಬಾತರೆ ಮೃತಪಟ್ಟರೆಂದು ಗುರುತಿಸಲಾಗಿದೆ.

ಟೆಂಪೊದಲ್ಲಿದ್ದ ಮೃತರಿಬ್ಬರು ಸೇರಿದಂತೆ ಒಟ್ಟು 8 ಮಂದಿ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ದರ್ಶನ ಪಡೆದು ಕಲಬುರಗಿ ಯತ್ತ ತೆರಳುತ್ತಿದ್ದರು. ಈ ವೇಳೆಯೇ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಎಸ್.ಪಿ ಅಡ್ಡೂರು ಶ್ರೀನಿವಾಸಲು ಮತ್ತು ಡಿಎಸ್ಪಿ ಗೊಪಿ ಬಿ.ಆರ್, ಸಿಪಿಐ ಪ್ರಕಾಶ್ ಯಾತನೂರ್, ಸಿಬ್ಬಂದಿ ಸಂಗಣ್ಣ ಸೇರಿದಂತೆ ಗಣಗಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಾಗಿ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....