ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಮಾರಕಾಸ್ತ್ರಗಳಿಂದ ಅತ್ತೆಯ ಕತ್ತು ಕೊಯ್ದು ಹತ್ಯೆ ಮಾಡಿದ ಅಳಿಯಂದಿಯರು

Date:

Share post:

ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಸ್ವತಃ ಅಳಿಯಂದರೆ ಮಾರಕಾಸ್ತ್ರಗಳಿಂದ ತನ್ನ ಅತ್ತೆಯ ಕತ್ತನ್ನು (ಕುತ್ತಿಗೆ) ಕೊಯ್ದು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ್ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಬಂದರವಾಡ್ ಗ್ರಾಮದ ನಿವಾಸಿ ಲಕ್ಕಮ್ಮ ತಂದೆ ಸೈಬಣ್ಣ ದೊಡ್ಡಮನಿ (40) ಎಂಬಾತರೆ ಕೊಲೆಯಾದ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆ ಕಟ್ಟುವ ವಿಚಾರದಲ್ಲಿ ಈ ಹಿಂದೆ ಕುಟುಂಬದಲ್ಲೇ ಜಗಳವಾಗಿತ್ತು. ಅದೇ ಹಳೆಯ ವೈಶಮ್ಯದಿಂದಾಗಿ ಈಗ ಮಹಿಳೆಯ ಕೊಲೆಯಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಕೊಲೆ ಆರೋಪಿಗಳಾದ ಸಂತೋಷ್(35) ಮಂಜುನಾಥ್(25) ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಫಜಲಪುರ ವೃತ್ತ ನಿರೀಕ್ಷಕರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...