ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಚಾಲನೆ

Date:

Share post:

ಕಲಬುರಗಿ: ಒಳ ಮತ್ತು ಹೊರ ಆವರಣದಲ್ಲಿ ಅರವಟಿಕೆ ಮೂಲಕ ಪಕ್ಷಿಗಳಿಗೆ ನೀರು ಕುಡಿಸುವ (ಉಣಿಸುವ) ಕಾರ್ಯಕ್ರಮವನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಹಮ್ಮಿಕೊಳ್ಳಲಾಯಿತು.

ಈ ಸಂಸ್ಥೆಯ ಮುಖ್ಯಸ್ಥ ಡಾ|| ಅನಿತಾ ಆರ್. ಅವರು ಎಲ್ಲಾ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಸೇರಿ ಕೆಲಸದ ಒತ್ತಡದ ಮಧ್ಯೆಯೂ ಸಹ ಪಕ್ಷಿಗಳಿಗೆ ನೀರು ಉಣಿಸುವ (ಕುಡಿಸುವ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾನವನ ಸುಂದರ ಬದುಕಿಗೆ ಸ್ಫೂರ್ತಿದಾಯಕವಾದ ವಾತಾವರಣವನ್ನು ಪಶು-ಪಕ್ಷಿಗಳಿಂದ ಸಿಗಲಿದ್ದು, ನಾವು ಬದುಕುವುದಕ್ಕೆ ಆಹಾರ ನೀರು ಎಷ್ಟು ಮುಖ್ಯವೋ ಅದೇ ರೀತಿ ಮೂಕ ಪಶು-ಪಕ್ಷಿಗಳಿಗೂ ಕೂಡ ಆಹಾರ ನೀರು ಅಷ್ಟೆ ಅವಶ್ಯಕವಾಗಿದೆ. ನಾನು ಅವುಗಳ ಸಂರಕ್ಷಣೆಯನ್ನು ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಹಾಗಾಗೀ ಪಕ್ಷಿಗಳಿಗೆ ಪ್ರತಿಯೊಬ್ಬರು ಆಹಾರ ಮತ್ತು ನೀರನ್ನು ನೀಡುವುದರ ಮೂಲಕ ಅವುಗಳನ್ನು ಕಾಪಾಡಬೇಕು ಎಂದರು.

ಸುಮಾರು 100 ಅರವಟಿಕೆ ಮೂಲಕ ಪಕ್ಷಿಗಳಿಗೆ ನೀರು ಒದಗಿಸುವುದಕ್ಕೆ ಗಿಡಗಳಿಗೆ ಕಟ್ಟಿ ನೀರನ್ನು ಕುಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಚೇರಿಯ ಅಧೀಕ್ಷಕ ಎಮ್. ಹೆಚ್. ಆಶೇಖಾನ್, ಜೈಲರ್‍ಗಳಾದ ಸಾಗರ ಪಾಟೀಲ್, ಶ್ರೀಮಂತ ಪಾಟೀಲ್, ಶಾಮ ಬಿದರಿ ಹಾಗೂ ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿ ಅರವಟಿಕೆಗಳನ್ನು ಕಟ್ಟಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...