ಕಲಬುರಗಿ| ‘ಫುಲೆ’ ಚಿತ್ರದ ದೃಶ್ಯಗಳಿಗೆ ಕತ್ತರಿ ಹಾಕಿದ್ದು ಖಂಡನೀಯ: ಅರ್ಜುನ ಭದ್ರೆ

Date:

Share post:

ಕಲಬುರಗಿ: ಅನಂತ್ ಮಹಾದೇವನ್ ನಿರ್ದೇಶಿಸಿರುವ ‘ಫುಲೆ’ ಚಲನಚಿತ್ರದಲ್ಲಿನ ಕೆಲವು ದೃಶ್ಯಗಳು ಬ್ರಾಹ್ಮಣ ಸಮಾಜದ ಒತ್ತಾಯದ ಮೇರೆಗೆ ಕೆಲವು ದೃಶ್ಯ ಹಾಗೂ ಸಂಭಾಷಣೆಗಳಿಗೆ ಕೇಂದ್ರ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿರುವುದು ಖಂಡನೀಯ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ರಾಜ್ಯ ಸಂಚಾಲಕ ಅರ್ಜುನ ಭದ್ರೆ ಹೇಳಿದ್ದಾರೆ.

ಬುಧವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಬದಲಾವಣೆಯ ಹರಿಕಾರ ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಫುಲೆ ಅವರು ದಾರ್ಶನಿಕ ದಂಪತಿಗಳು. ಈ ದಂಪತಿ ಗಳು ಐವತ್ತು ವರ್ಷಗಳ ಕಾಲ ನಿರಂತರವಾಗಿ ದಲಿತರ, ಹಿಂದುಳಿದ ವರ್ಗಗಳ ತುಳಿತಕ್ಕೆ ಒಳಗಾದ ಸಮುದಾಯದ ನಡುವೆ ಇದ್ದುಕೊಂಡು ಅವರ ಸೇವೆಯನ್ನು ಮಾಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳ ಜೀವನಾಧಾರಿತ ಚಿತ್ರ ಬಿಡುಗಡೆಯಾಗುತ್ತಿದ್ದು, ಅದನ್ನು ತಡೆ ಹಿಡಿಯುವಲ್ಲಿ ಕಿಡಿಗೇಡಿಗಳಿಂದ ಪ್ರಯತ್ನಗಳು ನಡೆದಿವೆ. ಹಾಗಾಗಿ ಏಪ್ರಿಲ್ 11 ರಂದು ಬಿಡುಗಡೆಯಾಗಬೇಕಿದ್ದ ಫುಲೆ ಚಿತ್ರ ಏಪ್ರಿಲ್ 25 ರಂದು ಬಿಡುಗಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸ್ಪೃಶ್ಯರನ್ನು ನೋಡುವುದೇ ಮಹಾಪಾಪವೆಂದು ಭಾವಿಸುತ್ತಿದ್ದ ಆ ಕಾಲದಲ್ಲಿ ಅಸ್ಪೃಶ್ಯರಿಗೆ ಮತ್ತು ಶೂದ್ರರಿಗೆ ಶಾಲೆಯನ್ನು ಪ್ರಾರಂಭಿಸಿ ಶಿಕ್ಷಣ ನೀಡಿದರು. ಕೆಲ ಸಮುದಾಯದ ಜನರು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ವೈಮನಸಿನಿಂದ ವೈದಿಕ ಶಾಹಿಗಳು ಅವರ ವಿರುದ್ಧ ಅನೇಕ ಷಡ್ಯಂತ್ರಗಳು ನಡೆಸಿದ್ದವು. ಅಂಥವುಗಳನ್ನೆಲ್ಲ ಎದುರಿಸಿ ಎಲ್ಲರಿಗೂ ಸಮಾನತೆ ರೂಪ ತೋರಿದ ಫುಲೆ ದಂಪತಿಗಳ ಕುರಿತಾಗಿರೋ ಚಿತ್ರಕ್ಕೆ ಬೇಕಂತಲೇ ಬ್ರಾಹ್ಮಣ ಫೆಡರೇಶನ್ ಅಡ್ಡಗಾಲು ಹಾಕುತ್ತಿದೆ. ಇಂತಹ ನಡೆಯನ್ನು ನಾವು ಖಂಡಿಸುತ್ತೇವೆ ಎಂದರು.

‘ಫುಲೆ’ ಸಿನಿಮಾದಲ್ಲಿ ನಿಜವಾದ ಘಟನೆಗಳ ದೃಶ್ಯಗಳಿವೆ. ಅವುಗಳನ್ನು ತೆಗೆದು ಹಾಕುವ ಸೆನ್ಸಾರ್ ಮಂಡಳಿಯು ಕೂಡಲೇ ನಿಲ್ಲಿಸಬೇಕು. ಸಿನಿಮಾದ ದೃಶ್ಯಗಳಿಗೆ ಕತ್ತರಿ ಹಾಕದೆ ಯಥಾವತ್ತಾದ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. P

ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪುರ್, ಮಹೇಶ ಕೋಕಿಲೆ, ಮಾನು ಗುರಿಕಾರ, ಅಜೀಜ್ ಯಾದಗಿರಿ ಸೇರಿದಂತೆ ಇನ್ನಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...