ಕಲಬುರಗಿ| ಕೇಂದ್ರ ಕಾರಾಗೃಹದ ಕೈದಿಗಳಿಗೆ ರಾಜಾತಿಥ್ಯ; ಡ್ರಗ್ಸ್ ಸೇವಿಸುತ್ತಿರುವ ವಿಡಿಯೋ ವೈರಲ್

Date:

Share post:

ಕಲಬುರಗಿ: ಇಲ್ಲಿನ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮತ್ತೊಂದು ಕರ್ಮಕಾಂಡ ಬಯಲಿಗೆ ಬಂದಿದೆ. ಕಾರಾಗೃದದಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎನ್ನಲಾದ ವಿಡಿಯೋ, ಸಾಮಾಜಿಕ ಜಾಲತಾಣ ಖಾತೆಗಳನ್ನು ಬಳಕೆ ಮಾಡುತ್ತಿರುವ ಮಾಹಿತಿ ಮತ್ತು ಮುಬೈಲ್ ಜಾಮಾರ್ ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. Kalaburag

ಎಪ್ರಿಲ್ 29 ರಂದು ಕಾರಾಗೃಹದ ಬ್ಯಾರಕ್ ಗಳಲ್ಲಿ ಮೊಬೈಲ್ ನೆಟ್ವರ್ಕ್ ಸಿಗದಂತೆ ಹಾಕಲಾದ ಜಾಮರನ್ನು ಕೈದಿಗಳು ಒಡೆದು ಧ್ವಂಸ ಮಾಡಿರುವ ಘಟನೆ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 7 ಕೈದಿಗಳನ್ನು ಬೆಳಗಾವಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೊಹಮ್ಮದ್ ಬೀರಾನ್ ಕುಟ್ಟಿ, ಫಿಹಿಮ್ ಪಟೇಲ್, ಸೈಯದ್ ತಲಾಹ ನೌಮಾನ್, ಸಂತೋಷ ಬಹೆಮನಿ ಅಲಿಯಾಸ್ ಪಾಟೀಲ್, ಮಜರ್ ಶೇಕ್ ಪಾಶಾ, ಪ್ರದೀಪ್ ಕುಮಾರ್ ಹಾಗೂ ಮೊಹಮ್ಮದ್ ನಸೀರ್ ಸ್ಥಳಾಂತರಗೊಂಡ ಕೈದಿಗಳು. ಜಾಮರ್ ಧ್ವಂಸ, ಕಾರಾಗೃಹದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಫರತಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಓರ್ವ ಕೈದಿಯ ಪೋಷಕರು ಕಾರಾಗೃಹದಲ್ಲಿ ಹಣವಂತರು ಮತ್ತು ರಾಜಕೀಯ ಪ್ರಭಾವಿ ಹೊಂದಿರುವ ಕೈದಿಗಳು ನಡೆಸಿರುವ ಕೃತ್ಯವನ್ನು ಅಮಾಯಕನ ಮೇಲೆ ಹಾಕಿ ಬೇರೆ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಿದೆ ಎಂದು ಆರೋಪಿಸಿ, ಸಿಸಿಟಿವಿ ದೃಶ್ಯವಳಿಗಳನ್ನು ಸುಕ್ಷ್ಮವಾಗಿ ಪರಿಶೀಲಿಸಿ ವರ್ಗಾವಣೆ ರದ್ದುಪಡಿಸಬೇಕೆಂದು ಕೈದಿ ಪೋಷಕರು ಕಾರಾಗೃಹದ ಡಿಜಿಪಿ, ಕಾರಾಗೃಹದ ಮುಖ್ಯ ಆಧೀಕ್ಷಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಮೊತ್ತೊಂದೆಡೆ ಕಾರಾಗೃದಲ್ಲಿ ಕೈದಿ ಓರ್ವ ಡ್ರಗ್ ಸೇವನೆ ಮಾಡುತ್ತಿರುವ ಎನ್ನಲಾದ ವಿಡಿಯೋ ವೈರಲ್ ಆಗಿದೆ, ಅಲ್ಲದೇ ಜೈಲಿನಲ್ಲಿರುವ ಕೈದಿಗಳು ಸ್ಮಾರ್ಟ್ ಫೋನ್ ಬಳಿಸಿ ಅಶ್ಲೀಲ ವಿಡಿಯೋ ನೋಡುತ್ತಿರುವುದು, ಸಾಮಾಜಿಕ ಜಾಲತಾಣ ಖಾತೆಗಳನ್ನು ನಡೆಸುತ್ತಿರುವ ಮಾಹಿತಿ ಇದೀಗ ಹರಿದಾಡುತ್ತಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಹಣಕೊಟ್ಟು ಕೈದಿಗಳು ರಾಜಾತಿಥ್ಯ ಪಡೆಯುತ್ತಿರುವ ಆರೋಪ ಮತ್ತೊಮ್ಮೆ ಕೇಳಿ ಬರುತ್ತಿದೆ.

ಕೇಂದ್ರ ಕಾರಾಗೃಹದ ಸುಧಾರಣಾ ಕಚೇರಿಯ ಕಣ್ಣುಗಾವಲಿನಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಎಲ್ಲಾ ಬ್ಯಾರಕ್ ಮತ್ತು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಆಳವಡಿಸುವ ಮೂಲಕ ಕೈದಿಗಳ ಮೇಲೆ ಹದ್ದಿನ ಕಣ್ಣು ಇಡುವುದು ಮತ್ತು ನಡೆಯುತ್ತಿರುವ ಎನ್ನಲಾಗುತ್ತಿರುವ ಎಲ್ಲಾ ಆಕ್ರಮಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...