ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರಸಂಕಿರಣ

Date:

Share post:

ಕಲಬುರಗಿ : ಇಂಗ್ಲೀಷ್ ಸಾಹಿತ್ಯವು ಬಹಳ ಹಳೆಯ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಪುದುಚರಿ ಕರಿಕಲ್ ಅರಿಗರ ಅಣ್ಣ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿಲಿಯನಸಿದ್ದ ಕೆ.ಪೈಗೊಂಡೆ ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ರವಿವಾರ ಇಂಗ್ಲೀಷ್ ವಿಭಾಗದಿಂದ ಹಮ್ಮಿಕೊಂಡ ಹಿಸ್ಟರಿ ಆಫ್ ಇಂಗ್ಲೀಷ್ ಲಿಟರೇಚರ್ ಆನ್ ಎಕ್ಸಪ್ಲೋರೇಷನ್ ಎಂಬ ವಿಷಯ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಇಂಗ್ಲೀಷ್ ಸಾಹಿತ್ಯವು ಇಂಗ್ಲೀಷ್ ಮಾತನಾಡುವ ಪ್ರಪಂಚದಿoದ ಇಂಗ್ಲೀಷ್ ಭಾಷೆಯಲ್ಲಿ ಬರೆಯಲ್ಪಟ್ಟ ಸಾಹಿತ್ಯವಾಗಿದೆ. ಇದು 1400 ವರ್ಷಗಳಿಗೂ ಹೆಚ್ಚು ಕಾಲ ಅಭಿವೃದ್ಧಿಗೊಂಡಿದೆ. ಕವಿ ಮತ್ತು ನಾಟಕಕಾರ ವಿಲಿಯಂ ಶೇಕ್ಸಪಿಯರ್ ಇಂಗ್ಲೀಷ್ ಭಾಷೆಯ ಶ್ರೇಷ್ಠ ಬರಹಗಾರರಾಗಿ ಇಂಗ್ಲೀಷ್ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. 16ನೇ ಶತಮಾನದ ಅಂತ್ಯ ಮತ್ತು 18ನೇ ಶತಮಾನದ ಆರಂಭದ ನಡುವೆ ಬ್ರಿಟಿಷ್ ಸಾಮ್ರಾಜ್ಯದ ಬೆಳವಣಿಗೆಯೊಂದಿಗೆ ಇಂಗ್ಲೀಷ್ ಭಾಷೆ ಪ್ರಪಂಚದಾದ್ಯoತ ಹರಿಡಿತು ಎಂದು ಇಂಗ್ಲೀಷ್ ಸಾಹಿತ್ಯದ ಇತಿಹಾಸದ ಮೇಲೆ ಬೆಳಕು ಚೆಲ್ಲಿದರು ಎಂದರು.

ವೇದಿಕೆ ಮೇಲೆ ಪ್ರಾಧ್ಯಾಪಕರಾದ ಡಾ.ಸೀಮಾ ಪಾಟೀಲ, ಕೃಪಾಸಾಗರ ಗೊಬ್ಬುರ್ ಇದ್ದರು. ಪ್ರೀತಿ ಬಿರಾದಾರ ಮುಖ್ಯ ಅತಿಥಿಗಳ ಪರಿಚಯ ಮಾಡಿದರೆ, ಭೀಮಸೇನ್ ಜೋಷಿ ಸ್ವಾಗತಿಸಿದರು. ಕು.ಜವೇರಿಯಾ ಅಂಜುಮ್‌ಶೇಖ ನಿರೂಪಿಸಿ, ವಂದಿಸಿದರು. ಕು.ಸ್ಪೂರ್ತಿ ಪಾಂಚಾಳ ಪ್ರಾರ್ಥಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...