ಕಲಬುರಗಿ | ಕವಯತ್ರಿ, ಲೇಖಕಿ ಡಾ. ತಮಿಳು ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

Date:

Share post:

ಕಲಬುರಗಿ: ಪ್ರೊ. ಮಲ್ಲೇಪುರಂ ಸಾಂಸ್ಕøತಿಕ ಪ್ರತಿಷ್ಠಾನ, ಚೆನ್ನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾಗಿರುವ ಕವಿ, ಸಂಶೋಧಕರಿ ಡಾ. ತಮಿಳ ಸೆಲ್ವಿ ಅವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಪ್ರೊ. ಎಚ್.ಟಿ. ಪೋತೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025ನೇ ಸಾಲಿನ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

 

ಚೈನ್ನೈಯಲ್ಲಿದ್ದುಕೊಂಡು ಕನ್ನಡ ಮತ್ತು ತಮಿಳು ಸಾಹಿತ್ಯ ಸಂಸ್ಕøತಿ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ‘ಅವರ ನಾನು ಅವಳಲ್ಲ ಅವನು’ ಅನುವಾದಿತ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಶ್ರೇಷ್ಠ ಅನುವಾದಕಿ ಪ್ರಶಸ್ತಿ ಸೇರಿದಂತೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ತಮಿಳು ನಾಡಿನ ಶ್ರೇಷ್ಠ ಲೇಖಕಿ ಪ್ರಶಸ್ತಿಯೂ ಸೇರಿದಂತೆ ಅವರ ಅನೇಕ ಕೃತಿಗಳಿಗೆ ಪ್ರಶಸ್ತಿ ಗೌರವಗಳು ಸಂದಿವೆ.

 

2025 ಜೂನ್ 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿಯು 10,000 ರೂ. ನಗದು ಪ್ರಶಸ್ತಿ ಫಲಕ ಶಾಲು ಸನ್ಮಾನ ಹೊಂದಿರುತ್ತದೆ.

ಪ್ರತಿಷ್ಠಾನದ ಅಧ್ಯಕ್ಷ ಡಾ. ವಸಂತ ನಾಶಿ, ಡಾ. ಸಂತೋಷಕುಮಾರ ಕಂಬಾರ, ಡಾ. ಹಣಮಂತ ಮೇಲಕೇರಿ ಸಭೆಯಲ್ಲಿ ಹಾಜರಿದರು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಶ್ರೀಶೈಲ ನಾಗರಾಳ ಮತ್ತು ಕಾರ್ಯದರ್ಶಿ ಡಾ. ಎಂ.ಬಿ. ಕಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...