ಕಲಬುರಗಿ: ದುಕಾನ ಅವರ ‘ಹೂಗನಸು’ ಕವನ ಸಂಕಲನ ಬಿಡುಗಡೆ

Date:

Share post:

ಕಲಬುರಗಿ: ನಿವೃತ್ತ ಕನ್ನಡ ಉಪನ್ಯಾಸಕರಾದ ರೇವಣಸಿದ್ದಪ್ಪ ದುಕಾನ ಅವರ ‘ಹೂಗನಸು’ ಕವನ ಸಂಕಲನದ ಬಿಡುಗಡೆ ಸಮಾರಂಭ ಇಂದು(ಮೇ15) ಸಂಜೆ 5:30ಕ್ಕೆ ಅನ್ನಪೂರ್ಣ ಕ್ರಾಸ್‌ನ ಕಲಾಮಂಡಳದಲ್ಲಿ ನಡೆಯಲಿದೆ ಎಂದು ಕಲ್ಬುರ್ಗಿ ಸಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಬಿ. ಎಚ್. ನಿರಗುಡಿ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನಿಧ್ಯವನ್ನು ಸಂಸ್ಥಾನ ಹಿರೇಮಠ ಶ್ರೀನಿವಾಸ ಸರಡಗಿ ಶ್ರೀಗಳಾದ ಪೂಜ್ಯಶ್ರೀ ಡಾ. ರೇವಣಸಿದ್ಧ ಶಿವಾಚಾರ್ಯರು ಹಾಗೂ ಸುಕ್ಷೇತ್ರ ಭರತ್ ನೂರ ಚಿಕ್ಕಗುರು ನಂಜೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಕೃತಿಯನ್ನು ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಧ್ಯಾಪಕರೂ ಆಗಿರುವ ವ್ಹಿ ಜಿ ಮಹಿಳಾ ಮಹಾವಿದ್ಯಾಲಯದ ಡಾ. ವಿಜಯಕುಮಾರ್ ಪರುತೆ ವಹಿಸಲಿದ್ದು, ಕೃತಿಯ ವಿಮರ್ಶೆಯನ್ನು ಸಾಹಿತಿ ಡಾ. ಶೈಲಜಾ ಬಾಗೇವಾಡಿ ಮಾಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸಿದ್ದರಾಮ ಹೊನ್ಕಲ್ ಹಾಗೂ ಮಧುಕರ್ ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ ಎಂದು ಬಿ. ಎಚ್. ನಿರಗುಡಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...