ಕಲಬುರಗಿ| 11 ತಿಂಗಳಿಂದ ತಲೆಮರಿಸಿಕೊಂಡಿದ್ದ ಕಳ್ಳತನ ಆರೋಪಿ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸಲು

Date:

Share post:

ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ನಿಜಾಮ ಗೇಟ್ ವಾಡಿ ನಿವಾಸಿ ಶೇಖ್ ಪಾಶ ತಂದೆ ಬಾಬಾ ಮೈನುದ್ದೀನ್ ಬಂಧಿತ ಆರೋಪಿಯಾಗಿದ್ದು, ಈತನಿಂದ 4,40,400 ರೂಪಾಯಿ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಗುರುವಾರ ಜಿಲ್ಲಾ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಅವರು ಮಾಹಿತಿ ನೀಡಿದರು.

ಈ ಹಿಂದೆ ಇದೇ ಪಕರಣದಲ್ಲಿ ನಾಲವಾರ ನಿವಾಸಿಗಳಾದ ಸಿದ್ದೀಕ್ ತಂದೆ ಅಹಮದ್ ಮತ್ತು ಉಬೇದ್ ಮಹಮ್ಮದ್ ಚಾವುಸ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಗಿರುವ ಶೇಖ್ ಪಾಶ ಎಂಬಾತನು ಕಳೆದ 11 ತಿಂಗಳಿಂದ ಮಹಾರಾಷ್ಟ್ರದ ಪುನಾ, ಬಾಂಬೆ ಸೇರಿದಂತೆ ಮತ್ತಿತರ ನಗರಗಳಲ್ಲಿ ತನ್ನ ವಾಸ ಸ್ಥಳವನ್ನು ಬದಲಾಯಿಸುತ್ತಾ ತಲೆಮಾರಿಸಿಕೊಂಡಿದ್ದ. ಈತನನ್ನು ಬಂಧಿಸಲು ತನಿಖಾ ತಂಡಗಳನ್ನು ರಚಿಸಲಾಗಿತ್ತು, ಕೊನೆಗೆ ಆರೋಪಿಯನ್ನು ವಶಕ್ಕೆ ಪಡೆದು ಕಳ್ಳತನವಾಗಿದ್ದ 4,40,400 ರೂಪಾಯಿ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿ ಪಿ ಚಂದ್ರಶೇಖರ್ ತಿಗಡಿ, ಪಿಎಸ್ಐಗಳಾದ ಶ್ರೀಶೈಲ್ ಅಂಬಾಟಿ ಚಂದ್ರಮಪ್ಪ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...